ನವೀನ್ ಶಂಕರ್ 
ಸಿನಿಮಾ ಸುದ್ದಿ

'ಗುಲ್ಟೂ' ಶಂಕರ್ ಮುಂದಿನ ಸಿನಿಮಾ 'ಮೂಲತಃ ನಮ್ಮವರೇ'!

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.

ಚೊಚ್ಚಲ ಸಿನಿಮಾ ಗುಲ್ಟೂ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಮೂಲತಃ ನಮ್ಮವರೇ ಎಂಬ ಟೈಟಲ್ ನ ಚಿತ್ರೀಕರಣ ಮುಗಿಸಿದ್ದಾರೆ.

ರಂಗಭೂಮಿ ನಂಟಿರುವ ಚೇತನ್ ಭಾಸ್ಕರಯ್ಯ  'ಮೂಲತಃ ನಮ್ಮವರೇ' ಸಿನಿಮಾದ ಮೂಲಕ ನಿರ್ದೇಶಕರಾಗಿದ್ದಾರೆ. 'ನನಗೆ ಸಿನಿಮಾ ನಿರ್ದೇಶನದಲ್ಲಿ ತುಂಬ ಆಸಕ್ತಿ ಇತ್ತು. ಈ ಹಿಂದೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ‌‌. ಹಿರಿತೆರೆಯಲ್ಲಿ ಇದು ನನಗೆ ಮೊದಲ ಚಿತ್ರ.

'ಮೂಲತ: ನಮ್ಮವರೇ' ಇದೊಂದು ಕೌಟುಂಬಿಕ ಚಿತ್ರ. ಅಪ್ಪ- ಮಗನ ಬಾಂಧವ್ಯದ ಸನ್ನಿವೇಶಗಳೇ ಈ ಚಿತ್ರದ ಹೈಲೆಟ್ . ಬೆಂಗಳೂರು ಹಾಗೂ ಕರಾವಳಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ‌. ನವೀನ್ ಶಂಕರ್ ಬಿಟ್ಟರೆ ಬಹುತೇಕರಿಗೆ ಇದು ಮೊದಲ ಸಿನಿಮಾ' ಎಂದರು ನಿರ್ದೇಶಕ ಚೇತನ್ ಭಾಸ್ಕರಯ್ಯ.

ಅಂದಹಾಗೆ, ಅವರು ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಮುಂಬೈನ ತಾನ್ಯಾ ಈ ಚಿತ್ರದ ನಾಯಕಿ. ಅವಿನಾಶ್, ಮಾಳವಿಕಾ ಅವಿನಾಶ್, ತೆಲುಗಿನ ಸತ್ಯಪ್ರಕಾಶ್, ಕಾವ್ಯಾ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

'ಮೂಲತಹ ನಮ್ಮವರೇ' ಮ್ಯೂಸಿಕ್ ಬ್ಯಾಂಡ್ ಏಕ್ ಕ್ಯಾಬ್ ಸಂಗೀತ ನೀಡಲಿದ್ದು, ಜುವೀನ್ ಸಿಂಗ್ ಹಿನ್ನೆಲೆ ಸಂಗೀತದ ಹೊಣೆ ಹೊತ್ತಿದ್ದಾರೆ. ಚಿತ್ರಕ್ಕೆ ಚಂತು ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT