ಪದವಿ ಪೂರ್ವ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಪದವಿ ಪೂರ್ವ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ನಟ ಅಭಿಷೇಕ್ ಅಂಬರೀಶ್

ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರು: ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.

ಚಿತ್ರದ ಮೊದಲ ಹಾಡನ್ನು ನವರಸನಾಯಕ ಜಗ್ಗೇಶ್ ಅವರು ಬಿಡುಗಡೆ ಮಾಡಿದ್ದರೆ, ಎರಡನೇ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ಅನ್ನು ಅಭಿಷೇಕ್ ಅಂಬರೀಶ್ ಬಿಡುಗಡೆ ಮಾಡಲಿದ್ದಾರೆ.

ಡಿಸೆಂಬರ್‌ ವಾರಾಂತ್ಯ ಸಿನಿಮಾ ಬಿಡುಗಡೆಗೆ ಲಕ್ಕಿವೀಕ್‌ ಎನ್ನುವ ಮಾತು ಗಾಂಧಿನಗರದಲ್ಲಿದೆ. ಅದರಂತೆ ಈಗಾಗಲೇ ಸಿನಿಮಾ ಬಿಡುಗಡೆಗೆ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿರುವ ಪದವಿ ಪೂರ್ವ ಸಿನಿಮಾ ಒಂದಿಲ್ಲೊಂದು ಕಾರಣಗಳಿಗಾಗಿ ಸ್ಯಾಂಡಲ್‌ವುಡ್‌ನಲ್ಲಿ ಗಮನಸೆಳೆದಿದೆ.

ಅಭಿಷೇಕ್ ಅಂಬರೀಶ್

ಯೋಗರಾಜ್‌ ಭಟ್‌ ಅವರ ನಿರ್ಮಾಣ ಸಂಸ್ಥೆ ಯೋಗರಾಜ್‌ ಸಿನಿಮಾಸ್‌ ಹಾಗೂ ರವಿ ಶಾಮನೂರ್‌ ಫಿಲಂಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಯೂಥ್‌ಫುಲ್‌ ಲವ್‌ ಸ್ಟೋರಿ ‘ಪದವಿ ಪೂರ್ವ’ ಡಿಸೆಂಬರ್ 30ಕ್ಕೆ ಬಿಡುಗಡೆಯಾಗಲಿದೆ.

ಇದೇ ಮೊದಲ ಬಾರಿಗೆ ಹರಿಪ್ರಸಾದ್‌ ಜಯಣ್ಣ ಅವರು ನಿರ್ದೇಶಕರ ಕ್ಯಾಪ್‌ ತೊಟ್ಟು ಈ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ರಂಗಾಯಣ ರಘು, ‘ರಾಮಾರಾಮಾರೇ’ ಖ್ಯಾತಿಯ ನಟರಾಜ್ ಭಟ್ ತಾರಾಗಣದಲ್ಲಿದ್ದು, ಯೋಗರಾಜ್ ಭಟ್, ನಟಿ ಅದಿತಿ ಪ್ರಭುದೇವ, ದಿವ್ಯ ಉರುಡುಗ, ‘ಕಾಮಿಡಿ ಕಿಲಾಡಿ’ ನಯನ, ಶ್ರೀ ಮಹದೇವ್ ಅತಿಥಿ ಪಾತ್ರದಲ್ಲಿದ್ದಾರೆ.

‘ಪದವಿಪೂರ್ವ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದ್ದು, ಯೋಗರಾಜ್ ಭಟ್ ಸಾಹಿತ್ಯವಿದೆ. ಛಾಯಾಗ್ರಾಹಕ ಸಂತೋಷ್ ರೈ ಪತಾಜೆ ಛಾಯಾಗ್ರಹಣ, ಮಧು ತುಂಬಕೆರೆಯ ಸಂಕಲನ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT