ಪದವಿ ಪೂರ್ವ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

'ಪದವಿ ಪೂರ್ವ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ನಟ ಅಭಿಷೇಕ್ ಅಂಬರೀಶ್

ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರು: ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಪದವಿ ಪೂರ್ವ ಸಿನಿಮಾದ ಟ್ರೈಲರ್ ಡಿ.21ರಂದು ಬಿಡುಗಡೆಯಾಗಲಿದ್ದು, ನಟ ಅಭಿಷೇಕ್ ಅಂಬರೀಶ್ ಅವರು ಬಿಡುಗಡೆ ಮಾಡಲಿದ್ದಾರೆ.

ಚಿತ್ರದ ಮೊದಲ ಹಾಡನ್ನು ನವರಸನಾಯಕ ಜಗ್ಗೇಶ್ ಅವರು ಬಿಡುಗಡೆ ಮಾಡಿದ್ದರೆ, ಎರಡನೇ ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ಅನ್ನು ಅಭಿಷೇಕ್ ಅಂಬರೀಶ್ ಬಿಡುಗಡೆ ಮಾಡಲಿದ್ದಾರೆ.

ಡಿಸೆಂಬರ್‌ ವಾರಾಂತ್ಯ ಸಿನಿಮಾ ಬಿಡುಗಡೆಗೆ ಲಕ್ಕಿವೀಕ್‌ ಎನ್ನುವ ಮಾತು ಗಾಂಧಿನಗರದಲ್ಲಿದೆ. ಅದರಂತೆ ಈಗಾಗಲೇ ಸಿನಿಮಾ ಬಿಡುಗಡೆಗೆ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿರುವ ಪದವಿ ಪೂರ್ವ ಸಿನಿಮಾ ಒಂದಿಲ್ಲೊಂದು ಕಾರಣಗಳಿಗಾಗಿ ಸ್ಯಾಂಡಲ್‌ವುಡ್‌ನಲ್ಲಿ ಗಮನಸೆಳೆದಿದೆ.

ಅಭಿಷೇಕ್ ಅಂಬರೀಶ್

ಯೋಗರಾಜ್‌ ಭಟ್‌ ಅವರ ನಿರ್ಮಾಣ ಸಂಸ್ಥೆ ಯೋಗರಾಜ್‌ ಸಿನಿಮಾಸ್‌ ಹಾಗೂ ರವಿ ಶಾಮನೂರ್‌ ಫಿಲಂಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಯೂಥ್‌ಫುಲ್‌ ಲವ್‌ ಸ್ಟೋರಿ ‘ಪದವಿ ಪೂರ್ವ’ ಡಿಸೆಂಬರ್ 30ಕ್ಕೆ ಬಿಡುಗಡೆಯಾಗಲಿದೆ.

ಇದೇ ಮೊದಲ ಬಾರಿಗೆ ಹರಿಪ್ರಸಾದ್‌ ಜಯಣ್ಣ ಅವರು ನಿರ್ದೇಶಕರ ಕ್ಯಾಪ್‌ ತೊಟ್ಟು ಈ ಸಿನಿಮಾಗೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ರಂಗಾಯಣ ರಘು, ‘ರಾಮಾರಾಮಾರೇ’ ಖ್ಯಾತಿಯ ನಟರಾಜ್ ಭಟ್ ತಾರಾಗಣದಲ್ಲಿದ್ದು, ಯೋಗರಾಜ್ ಭಟ್, ನಟಿ ಅದಿತಿ ಪ್ರಭುದೇವ, ದಿವ್ಯ ಉರುಡುಗ, ‘ಕಾಮಿಡಿ ಕಿಲಾಡಿ’ ನಯನ, ಶ್ರೀ ಮಹದೇವ್ ಅತಿಥಿ ಪಾತ್ರದಲ್ಲಿದ್ದಾರೆ.

‘ಪದವಿಪೂರ್ವ’ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದ್ದು, ಯೋಗರಾಜ್ ಭಟ್ ಸಾಹಿತ್ಯವಿದೆ. ಛಾಯಾಗ್ರಾಹಕ ಸಂತೋಷ್ ರೈ ಪತಾಜೆ ಛಾಯಾಗ್ರಹಣ, ಮಧು ತುಂಬಕೆರೆಯ ಸಂಕಲನ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT