ತುನಿಷಾ ಶರ್ಮಾ 
ಸಿನಿಮಾ ಸುದ್ದಿ

ಶೂಟಿಂಗ್ ಸೆಟ್ ನಲ್ಲಿಯೇ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ!

ಕಿರುತೆರೆ ನಟಿಯೊಬ್ಬಳು ಟಿವಿ ಧಾರಾವಾಹಿಯೊಂದರ ಶೂಟಿಂಗ್  ಸೆಟ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈನಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಕಿರುತೆರೆ ನಟಿಯೊಬ್ಬಳು ಟಿವಿ ಧಾರಾವಾಹಿಯೊಂದರ ಶೂಟಿಂಗ್  ಸೆಟ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈನಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸೆಟ್ ನಲ್ಲಿ ವಾಶ್ ರೂಂಗೆ ಹೋದ ತುನಿಷಾ ಶರ್ಮಾ, ತುಂಬಾ ಹೊತ್ತಿನವರೆಗೂ ವಾಪಸ್ಸಾಗಿಲ್ಲ. ನಂತರ ಡಾಕ್ಟರ್ ಬಾಗಿಲು ಮುರಿದಾಗ, ಆಕೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ತುನಿಷಾ ಶರ್ಮಾ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಭಾರತ್ ಕಾ ವೀರ್ ಪುತ್ರ ಮಹಾರಾಣಾ ಪ್ರತಾಪ್’ ಧಾರಾವಾಹಿ ಮೂಲಕ ಬಾಲಿವುಡ್​ ಕಿರುತೆಗೆ ಪಾದಾರ್ಪಣೆ ಮಾಡಿದ್ದರು.

ಚಕ್ರವರ್ತಿ ಅಶೋಕ ಸಾಮ್ರಾಟ್, ಗಬ್ಬರ್ ಪೊಂಚ್ ವಾಲಾ, ಮಹಾರಾಜ ರಂಜಿತ್ ಸಿಂಗ್, ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ತುನಿಷಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುವ ಮೂಲಕ ಅಪಾರ ಪ್ರಮಾಣದಲ್ಲಿ ಫಾಲೋವರ್ಸ್ ಹೊಂದಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT