ಯಶ್ 
ಸಿನಿಮಾ ಸುದ್ದಿ

ಎಲ್ಲರನ್ನೂ ಗೌರವಿಸೋಣ, ಬಾಲಿವುಡ್ ಅನ್ನು ಕೀಳಾಗಿ ಕಾಣಬೇಡಿ: ನೆಪೊಟಿಸಂ ಅಂದ್ರೆ ತನ್ನ ಹಿನ್ನೆಲೆಯ ಬಲದಿಂದ ತುಳಿಯೋದು; ಯಶ್

ದಕ್ಷಿಣದ ಸಿನಿಮಾಗಳು ಹಿಂದಿ ಚಿತ್ರಗಳಿಗೆ ಸವಾಲಾಗಿ ನಿಂತಿರುವ ಈ ಹೊತ್ತಿನಲ್ಲಿ ಬಾಲಿವುಡ್ ಅನ್ನು ದ್ವೇಷಿಸುವಂತಹ ಕೆಲಸವೂ ನಡೆದಿದೆ. ಹೀಗಾಗಿ ರಾಕಿಂಗ್ ಸ್ಟಾರ್  ಯಶ್, ಯಾವ ಸಿನಿಮಾ ರಂಗವನ್ನೂ ಕೀಳಾಗಿ ಕಾಣಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಭಾರತೀಯ ಸಿನಿಮಾ ರಂಗದಲ್ಲಿ ಮೇಲುಕೀಳಿನ ಸಮಸ್ಯೆ ಇಂದು ನೆನ್ನೆಯದಲ್ಲ. ಬಾಲಿವುಡ್ ಚಿತ್ರೋದ್ಯಮವೇ ಭಾರತದ ಚಿತ್ರೋದ್ಯಮ ಎನ್ನುವಂತಹ ವಾತಾವರಣ ನಿರ್ಮಾಣವಾಗಿತ್ತು.

ದಕ್ಷಿಣದ ಸಿನಿಮಾಗಳು ಹಿಂದಿ ಚಿತ್ರಗಳಿಗೆ ಸವಾಲಾಗಿ ನಿಂತಿರುವ ಈ ಹೊತ್ತಿನಲ್ಲಿ ಬಾಲಿವುಡ್ ಅನ್ನು ದ್ವೇಷಿಸುವಂತಹ ಕೆಲಸವೂ ನಡೆದಿದೆ. ಹೀಗಾಗಿ ರಾಕಿಂಗ್ ಸ್ಟಾರ್  ಯಶ್, ಯಾವ ಸಿನಿಮಾ ರಂಗವನ್ನೂ ಕೀಳಾಗಿ ಕಾಣಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಯೂ ಟ್ಯೂಬ್ ಗೆ ನೀಡಿದ ಸಂದರ್ಶನದಲ್ಲಿ ಯಶ್ ಮಾತನಾಡಿದ್ದಾರೆ. ಅವರು ನೇರ ನುಡಿಗಳಿಂದ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಕರ್ನಾಟಕದ ಜನರು ಬೇರೆ ಇಂಡಸ್ಟ್ರಿ ಬಗ್ಗೆ ಕೀಳಾಗಿ ಮಾತನಾಡಬಾರದು. ಎಲ್ಲರೂ ನಮ್ಮನ್ನು ಹಾಗೆ ನಡೆಸಿಕೊಂಡಾಗ ನಾವು ಕೂಡ ಆ ಸಮಸ್ಯೆಯನ್ನು ಎದುರಿಸಿದ್ದೆವು. ಆ ಗೌರವ ಪಡೆಯಲು ಶ್ರಮಿಸಿದ್ದೇವೆ. ಅದು ಸಿಕ್ಕ ನಂತರ ನಾವು ಯಾರನ್ನೂ ಕೆಟ್ಟದಾಗಿ ನಡೆಸಿಕೊಳ್ಳಬಾರದು. ನಾವು ಎಲ್ಲರನ್ನೂ ಗೌರವಿಸಬೇಕು. ಬಾಲಿವುಡ್ ಅನ್ನು ಗೌರವಿಸಿ. ಈ ಉತ್ತರ ಮತ್ತು ದಕ್ಷಿಣ ಎಂಬುದನ್ನು ಮರೆತುಬಿಡಿ’ ಎಂದು ಕೋರಿದ್ದಾರೆ ಯಶ್.

ನಾವು ಉತ್ತಮ ಸಿನಿಮಾಗಳನ್ನು ಮಾಡಬೇಕು. ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ಚಿತ್ರಮಂದಿರಗಳನ್ನು ನಿರ್ಮಿಸಬೇಕು. ಮಾಡಲು ತುಂಬಾ ಕೆಲಸಗಳಿವೆ. ನಮ್ಮ ನಡುವೆ ಜಗಳವಾಡುವುದನ್ನು ನಾವು ನಿಲ್ಲಿಸಬೇಕಿದೆ. ಹೊರಗಿನ ಪ್ರಪಂಚದೊಂದಿಗೆ ಸ್ಪರ್ಧಿಸಬೇಕಿದೆ’ ಎಂದಿದ್ದಾರೆ. ಈ ಮೂಲಕ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ನನ್ನ ಪ್ರಕಾರ ನೆಪೊಟಿಸಂ ಅಂದರೆ ತನ್ನ ಹಿನ್ನೆಲೆಯ ಬಲದಿಂದ ಉಳಿದವರನ್ನು ತುಳಿಯೋದು. ಅದನ್ನು ಮಾಡದೇ ಪ್ರತಿಭೆ, ಮೆರಿಟ್‌ ಇದ್ದರೆ ಇಂಡಸ್ಟ್ರಿಯಲ್ಲಿ ಯಾರು ಬೇಕಿದ್ದರೂ ಸಿನಿಮಾ ಮಾಡಬಹುದು. ಬೇರೆ ಚಿತ್ರರಂಗವನ್ನು ತೆಗಳಬೇಡಿ, ಬಾಲಿವುಡ್‌ಅನ್ನು ಗೌರವಿಸಿ, ಕನ್ನಡ ಅಭಿಮಾನಿಗಳಿಗೆ ಯಶ್ ಮನವಿ ಮಾಡಿದ್ದಾರೆ.  ನನ್ನ ಸಕ್ಸಸ್‌ ಅನ್ನು ನಾನೇ ಹೇಳಿಕೊಳ್ಳೋದು ನನಗೆ ಇಷ್ಟಇಲ್ಲ. ಯಶಸ್ವಿ ಆದರೆ ಜನರಿಗೆ ಅದು ತಿಳಿದೇ ತಿಳಿಯುತ್ತದೆ. ಹೀಗಾಗಿ ನಾನು ಸಿನಿಮಾ ಸಕ್ಸಸ್‌ ಬಗ್ಗೆ ಮಾತಾಡೋದು ಕಡಿಮೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel