ಧನ್ಯಾ ಬಾಲಕೃಷ್ಣ ಮತ್ತು ಬಾಲಾಜಿ ಮೋಹನ್ 
ಸಿನಿಮಾ ಸುದ್ದಿ

ನಿರ್ದೇಶಕ ಬಾಲಾಜಿ ಮೋಹನ್ ಜೊತೆ ಸದ್ದಿಲ್ಲದೇ ಸಪ್ತಪದಿ ತುಳಿದ ಕನ್ನಡತಿ ಧನ್ಯಾ ಬಾಲಕೃಷ್ಣ: ವರ್ಷದ ಹಿಂದೆಯೇ ಗುಟ್ಟಾಗಿ ವಿವಾಹ!

ತಮಿಳು ನಿರ್ದೇಶಕ ಬಾಲಾಜಿ ಮೋಹನ್ ಜತೆ ಅವರು ಸೀಕ್ರೆಟ್ ಆಗಿ ಮದುವೆ ಆಗಿದ್ದಾರೆ ಎನ್ನಲಾಗಿತ್ತು. ಈಗ ಧನ್ಯಾ ಬಾಲಕೃಷ್ಣ ಹಾಗೂ ಬಾಲಾಜಿ ಮೋಹನ್ ಮದುವೆ ಆಗಿರುವ ವಿಚಾರ ಅಧಿಕೃತವಾಗಿದೆ

ಬೆಂಗಳೂರು: ಕರ್ನಾಟಕ ಮೂಲದ ನಟಿ ಧನ್ಯಾ ಬಾಲಕೃಷ್ಣ ಅವರು ತಮಿಳು ಹಾಗೂ ತೆಲುಗಿನಲ್ಲಿ ಗುರುತಿಸಿಕೊಂಡಿದ್ದೇ ಹೆಚ್ಚು, ಧನ್ಯಾ ಬಾಲಕೃಷ್ಣ ಅವರು ಕಳೆದ ಒಂದು ದಶಕಗಳಿಂದ ಸಿನಿಮಾರಂಗದಲ್ಲಿದ್ದಾರೆ. ತಮಿಳು ಸಿನಿಮಾದ ಮೂಲಕ. ಕಾಲಿವುಡ್‌, ಟಾಲಿವುಡ್ ಸಿನಿಮಾಗಳಲ್ಲಿ ನಟಿಸಿದ ಅವರು ಕನ್ನಡ ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ.

ತಮಿಳು ನಿರ್ದೇಶಕ ಬಾಲಾಜಿ ಮೋಹನ್ ಜತೆ ಅವರು ಸೀಕ್ರೆಟ್ ಆಗಿ ಮದುವೆ ಆಗಿದ್ದಾರೆ ಎನ್ನಲಾಗಿತ್ತು. ಈಗ ಧನ್ಯಾ ಬಾಲಕೃಷ್ಣ ಹಾಗೂ ಬಾಲಾಜಿ ಮೋಹನ್ ಮದುವೆ ಆಗಿರುವ ವಿಚಾರ ಅಧಿಕೃತವಾಗಿದೆ. 

ನಿರ್ದೇಶಕ ಬಾಲಾಜಿ ಮೋಹನ್ ಅವರು 2012ರಲ್ಲಿ ಅರುಣಾ ಎಂಬುವವರೊಂದಿಗೆ ಮದುವೆ ಆಗಿದ್ದರು. ಆದರೆ ಹೊಂದಾಣಿಕೆಯ ಕೊರತೆಯಿಂದ ಅವರು ಮದುವೆ ಒಂದೇ ವರ್ಷದಲ್ಲಿ ವಿಚ್ಛೇದನಲ್ಲಿ ಅಂತ್ಯಗೊಂಡಿತ್ತು. ಇದೀಗ ಅವರು ಧನ್ಯಾ ಬಾಲಕೃಷ್ಣ ಅವರೊಂದಿಗೆ ಎರಡನೇ ಮದುವೆ ಆಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಮದುವೆ ಈ ವರ್ಷದ ಆರಂಭದಲ್ಲೇ (ಜ.23) ನಡೆದಿದೆ. ಅಷ್ಟಕ್ಕೂ ಈ ಮದುವೆ ಸುದ್ದಿ ಈಗ ಚರ್ಚೆಗೆ ಬಂದಿರುವುದಕ್ಕೆ ಕಾರಣ, ನಟಿ ಕಲ್ಪಿಕಾ ಗಣೇಶ್ ಅವರಿಂದಾಗಿ.

ಈ ಬಗ್ಗೆ ಬಾಲಾಜಿ ಅವರು ಕೋರ್ಟ್​ ಮೊರೆ ಹೋಗಿದ್ದಾರೆ. ನಟಿ ಕಲ್ಪಿಕಾ ಗಣೇಶ್ ಅವರು ತಮ್ಮ ಮದುವೆ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿ ಮಾನ ಹಾನಿ ಮಾಡಿದ್ದಾರೆ ಎಂದು ಬಾಲಾಜಿ ಅವರು ಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾನು ಹಾಗೂ ಧನ್ಯಾ ಬಾಲಕೃಷ್ಣ ಅವರು ಕಳೆದ ಜನವರಿ 23ರಂದು ಮದುವೆ ಆಗಿದ್ದೇವೆ. ಆದರೆ ಕಲ್ಪಿಕಾ ಗಣೇಶ್ ಅವರು ನಮ್ಮ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಾ ಬಂದಿದ್ದಾರೆ. ಇದರಿಂದ ಮಾನ ಹಾನಿ ಆಗಿದೆ’ ಎಂದು ಅರ್ಜಿಯಲ್ಲಿ ಬಾಲಾಜಿ ಬರೆದುಕೊಂಡಿದ್ದಾರೆ. ಸದ್ಯ ಈ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆ ಕೋರ್ಟ್​ ಕಲ್ಪಿಕಾಗೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT