ಕೊಳ್ಳೆಗಾಲದಲ್ಲಿ ವೇದ ಚಿತ್ರದ ಪ್ರಚಾರ ಸಂದರ್ಭದಲ್ಲಿ ಅಭಿಮಾನಿಗಳ ಮುಂದೆ ಸೆಲ್ಫಿ ತೆಗೆದುಕೊಂಡ ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

'ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ, ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು': ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಅಭಿಮಾನಿಗಳು ಆಗಾಗ ಬಾಸ್ ವಿಚಾರದಲ್ಲಿ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಸ್ಯಾಂಡಲ್ ವುಡ್ ನ ಬಾಸ್ ಯಾರು ಎಂಬ ವಿಷಯದಲ್ಲಿ ಆಗಾಗ ಫ್ಯಾನ್ಸ್ ವಾರ್ ನಡೆಯುತ್ತಿರುತ್ತದೆ. ಬಾಸ್ ಬಿರುದಿಗಾಗಿ ಅಭಿಮಾನಿಗಳ ಮಧ್ಯೆ ಕಿತ್ತಾಟ ನಡೆದೇ ಇದೆ. 

ಮೈಸೂರು: ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಅಭಿಮಾನಿಗಳು ಆಗಾಗ ಬಾಸ್ ವಿಚಾರದಲ್ಲಿ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಸ್ಯಾಂಡಲ್ ವುಡ್ ನ ಬಾಸ್ ಯಾರು ಎಂಬ ವಿಷಯದಲ್ಲಿ ಆಗಾಗ ಫ್ಯಾನ್ಸ್ ವಾರ್ ನಡೆಯುತ್ತಿರುತ್ತದೆ. ಬಾಸ್ ಬಿರುದಿಗಾಗಿ ಅಭಿಮಾನಿಗಳ ಮಧ್ಯೆ ಕಿತ್ತಾಟ ನಡೆದೇ ಇದೆ. 

ಇದಕ್ಕೆ ನಿನ್ನೆ ಮೈಸೂರಿನಲ್ಲಿ ನಟ ಶಿವರಾಜ್​ಕುಮಾರ್ (Shivarajkumar) ನೇರವಾಗಿ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ಜಗಳ ಮಾಡಿಕೊಳ್ಳುವ ಅಭಿಮಾನಿಗಳಿಗೆ ಶಿವರಾಜ್​ ಕುಮಾರ್ ಬುದ್ದಿವಾದ ಹೇಳಿದಂತಿದೆ ಅವರ ಮಾತುಗಳು. 

ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿ ನಿನ್ನೆ ಡಾ. ರಾಜ್​ಕುಮಾರ್ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಅವರು ಬಾಸ್ ಶಬ್ದ ಪ್ರಸ್ತಾಪವಾಯಿತು. ‘ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು. ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ? ಎಲ್ಲರ ಮನೆಯಲ್ಲೂ ಒಬ್ಬೊಬ್ಬ ಬಾಸ್ ಇರುತ್ತಾನೆ. ಎಲ್ಲರ ಹೃದಯದಲ್ಲೂ ಒಬ್ಬ ಬಾಸ್ ಇರ್ತಾನೆ. ಮನೆಗೆ ಅವನೇ ಬಾಸ್. ನಾನೊಬ್ಬನೇ ಬಾಸ್ ಅಲ್ಲ’ ಎಂದಿದ್ದಾರೆ.

ಮೈಸೂರಿನ ರಿಫ್ರೆಶ್​​ಮೆಂಟ್ ಮಾಲೀಕ ವಿಶ್ವ ಎಂಬುವವರು ಈ ಕಾರ್ಯಕ್ರಮ ಆಯೋಜಿಸಿದ್ದರು. ಅಲ್ಲಿದ್ದ ಯುವಕನೋರ್ವ ‘ವಿಶ್ವ ಅವರನ್ನು ನಮ್ಮ ಬಾಸ್’ ಎಂದರು. ಯುವಕನಿಗೆ ಬಾಸ್ ಬಗ್ಗೆ ಶಿವಣ್ಣ ವಿವರಣೆ ನೀಡಿದ್ದಾರೆ. ಶಿವರಾಜ್​ಕುಮಾರ್ ಮಾತಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಳೆದ ವಾರವಷ್ಟೇ ತೆರೆಕಂಡ ಶಿವರಾಜ್​ಕುಮಾರ್ ಅವರ ‘ವೇದ’ ಸಿನಿಮಾ ಗೆದ್ದು ವಿಮರ್ಶಕರ, ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT