ಡಾ ವಿಷ್ಣುವರ್ಧನ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಕನ್ನಡದ 'ಯಜಮಾನ' ಡಾ. ವಿಷ್ಣುವರ್ಧನ್ 13ನೇ ವರ್ಷದ ಪುಣ್ಯಸ್ಮರಣೆ

ಕನ್ನಡದ ಯಜಮಾನ ವಿಷ್ಣುದಾದರ 13ನೇ ವರ್ಷದ ಪುಣ್ಯದಿನ ಡಿಸೆಂಬರ್ 30. ಕನ್ನಡಿಗರ ಹೃದಯ ಗೆದ್ದ ನಟ ಡಾ. ವಿಷ್ಣುವರ್ಧನ್ ನಮ್ಮನ್ನು ಅಗಲಿ ಇಂದಿಗೆ 13 ವರ್ಷ ಕಳೆದಿದೆ. ಪುಣ್ಯಸ್ಮರಣೆ ದಿನವಾದ ಇಂದು ರಾಜ್ಯದ ಗಣ್ಯರು ಅವರನ್ನು ನೆನೆಸಿಕೊಳ್ಳುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿಗಳು ಮೈಸೂರಿನ ಅಭಿಮಾನಿ ಸ್ಟುಡಿಯೋದ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ಕನ್ನಡದ ಯಜಮಾನ ವಿಷ್ಣುದಾದರ 13ನೇ ವರ್ಷದ ಪುಣ್ಯದಿನ ಡಿಸೆಂಬರ್ 30. ಕನ್ನಡಿಗರ ಹೃದಯ ಗೆದ್ದ ನಟ ಡಾ. ವಿಷ್ಣುವರ್ಧನ್ ನಮ್ಮನ್ನು ಅಗಲಿ ಇಂದಿಗೆ 13 ವರ್ಷ ಕಳೆದಿದೆ. ಪುಣ್ಯಸ್ಮರಣೆ ದಿನವಾದ ಇಂದು ರಾಜ್ಯದ ಗಣ್ಯರು ಅವರನ್ನು ನೆನೆಸಿಕೊಳ್ಳುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬಂದ ಅಭಿಮಾನಿಗಳು ಬೆಂಗಳೂರಿನ ಕೆಂಗೇರಿ ಬಳಿಯಿರುವ ಅಭಿಮಾನಿ ಸ್ಟುಡಿಯೋದ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.

ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಸದಸ್ಯರು ಬನಶಂಕರಿ ದೇವಸ್ಥಾನದಿಂದ ಅಭಿಮಾನಿ ಸ್ಟುಡಿಯೋವರೆಗೆ ಸುಮಾರು ಹದಿನೈದು ಕಿಲೋಮೀಟರ್ ಪಾದಯಾತ್ರೆ ಮೂಲಕ ಪುಣ್ಯಭೂಮಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಐವತ್ತಕ್ಕೂ ಹೆಚ್ಚು ಅಭಿಮಾನಿಗಳು ಅಭಿಮಾನಿ ಸ್ಟುಡಿಯೋವರೆಗೂ ಮೈಸೂರಿನಿಂದ ಪಾದಯಾತ್ರೆ ಕೈಗೊಂಡು ವಿಷ್ಣು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಅನ್ನದಾನ, ರಕ್ತದಾನ: ರಾಜ್ಯದ ಮೂಲೆ ಮೂಲೆಗಳಲ್ಲಿ ಅನ್ನದಾನ ರಕ್ತದಾನಗಳಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಷ್ಣುವರ್ಧನ್ ಅವರನ್ನು ಸ್ಮರಿಸಿದ್ದಾರೆ. ಡಾ. ವಿಷ್ಣುವರ್ಧನ್ ಮತ್ತು ಅವರ ಕುಚುಕು ಗೆಳೆಯ ಡಾ. ಅಂಬರೀಶ್ ಇಬ್ಬರಿಗೂ ಹೆಸರು ಮತ್ತು ಕೀರ್ತಿ ತಂದುಕೊಟ್ಟು ಚಿತ್ರರಂಗದಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಿದ ನಾಗರಹಾವು ಚಿತ್ರ ಬಿಡುಗಡೆಯಾಗಿ ಈ ಹೊತ್ತಿಗೆ 50 ವರ್ಷಗಳಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT