ಪವಿತ್ರಾ ಲೋಕೇಶ್-ನರೇಶ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ತುಟಿಗೆ ಮುತ್ತಿಕ್ಕಿ ರೊಮ್ಯಾಂಟಿಕ್ ಆಗಿ ಸದ್ಯದಲ್ಲಿಯೇ ಮದುವೆಯಾಗುತ್ತಿದ್ದೇವೆ ಎಂದು ಪ್ರಕಟಿಸಿದ ನರೇಶ್-ಪವಿತ್ರಾ ಲೋಕೇಶ್

ಮೂಲತಃ ಕನ್ನಡತಿಯಾಗಿರುವ ಟಾಲಿವುಡ್ ನಲ್ಲಿ ಪೋಷಕ ನಟಿಯಾಗಿ ಹೆಸರು ಮಾಡಿರುವ ಪವಿತ್ರಾ ಲೋಕೇಶ್ 2023ರ ಹೊಸ ವರ್ಷದ ಹೊಸ್ತಿಲಿನಲ್ಲಿ ತಮ್ಮ ಮದುವೆಯ ವಿಚಾರವನ್ನು ವಿಶಿಷ್ಟವಾಗಿ ರೊಮ್ಯಾಂಟಿಕ್ ಆಗಿ ಬಹಿರಂಗಪಡಿಸಿದ್ದಾರೆ.

ಮೂಲತಃ ಕನ್ನಡತಿಯಾಗಿರುವ ಟಾಲಿವುಡ್ ನಲ್ಲಿ ಪೋಷಕ ನಟಿಯಾಗಿ ಹೆಸರು ಮಾಡಿರುವ ಪವಿತ್ರಾ ಲೋಕೇಶ್ 2023ರ ಹೊಸ ವರ್ಷದ ಹೊಸ್ತಿಲಿನಲ್ಲಿ ತಮ್ಮ ಮದುವೆಯ ವಿಚಾರವನ್ನು ವಿಶಿಷ್ಟವಾಗಿ ರೊಮ್ಯಾಂಟಿಕ್ ಆಗಿ ಬಹಿರಂಗಪಡಿಸಿದ್ದಾರೆ.

ಟಾಲಿವುಡ್ ನ ಖ್ಯಾತ ಪೋಷಕ ನಟ ನರೇಶ್(Naresh Tollywood) ಜೊತೆಗಿನ ಪವಿತ್ರಾ ಲೋಕೇಶ್(Pavitra Lokesh) ಸಂಬಂಧ ಕೆಲ ತಿಂಗಳ ಹಿಂದೆ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ನರೇಶ್ ಅವರ ಪತ್ನಿ ರಮ್ಯಾ ಇಬ್ಬರ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಮೈಸೂರಿನ ಹೊಟೇಲ್ ರೂಂನಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಉಳಿದುಕೊಂಡಿದ್ದ ವೇಳೆ ರಮ್ಯಾ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದ ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿ ಆ ಸುದ್ದಿ ಅಲ್ಲಿಗೇ ತಣ್ಣಗಾಗಿತ್ತು.

ಇದೀಗ ಪವಿತ್ರ ಲೋಕೇಶ್ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆಯೊತ್ತಿದ್ದಾರೆ. ವಿಡಿಯೊವೊಂದನ್ನು ಬಿಡುಗಡೆ ಮಾಡಿರುವ ಅವರು ಅದರಲ್ಲಿ ನರೇಶ್ ಮತ್ತು ಪವಿತ್ರಾ ಕ್ಯಾಂಡಲ್ ಲೈಟ್ ಉರಿಸಿ ಕೇಕ್ ಕತ್ತರಿಸಿ ಇಬ್ಬರೂ ಒಬ್ಬರಿಗೊಬ್ಬರು ತಿನ್ನಿಸಿ ನರೇಶ್ ಪವಿತ್ರಾ ಅವರ ತುಟಿಗೆ ರೊಮ್ಯಾಂಟಿಕ್ ಆಗಿ ಮುತ್ತಿಡುತ್ತಿದ್ದಾರೆ. 2023ರ ಹೊಸ ವರ್ಷಕ್ಕೆ ಶುಭಾಶಯ ಕೋರುತ್ತಾ ಹೊಸ ವರ್ಷ, ಹೊಸ ಆರಂಭ ನಿಮ್ಮೆಲ್ಲರ ಶುಭಹಾರೈಕೆ ಬೇಕು, ನಾನು ಮತ್ತು ಪವಿತ್ರಾ ನರೇಶ್ ಸದ್ಯದಲ್ಲಿಯೇ ಮದುವೆಯಾಗಲಿದ್ದೇವೆ ಎಂದು ಪ್ರಕಟಿಸಿದ್ದಾರೆ.

ತೆಲುಗಿನ ಖ್ಯಾತ ಹಿರಿಯ ನಟ ದಿವಂಗತ ಕೃಷ್ಣ ಅವರ ಪುತ್ರ, ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅವರ ಮಲ ಸಹೋದರ ನರೇಶ್ ಅವರಿಗೆ ಇದು ನಾಲ್ಕನೇ ಮದುವೆಯಾದರೆ ಪವಿತ್ರಾ ಲೋಕೇಶ್ ಅವರಿಗೆ ಮೂರನೇ ಮದುವೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT