ಪವಿತ್ರಾ ಲೋಕೇಶ್-ನರೇಶ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ತುಟಿಗೆ ಮುತ್ತಿಕ್ಕಿ ರೊಮ್ಯಾಂಟಿಕ್ ಆಗಿ ಸದ್ಯದಲ್ಲಿಯೇ ಮದುವೆಯಾಗುತ್ತಿದ್ದೇವೆ ಎಂದು ಪ್ರಕಟಿಸಿದ ನರೇಶ್-ಪವಿತ್ರಾ ಲೋಕೇಶ್

ಮೂಲತಃ ಕನ್ನಡತಿಯಾಗಿರುವ ಟಾಲಿವುಡ್ ನಲ್ಲಿ ಪೋಷಕ ನಟಿಯಾಗಿ ಹೆಸರು ಮಾಡಿರುವ ಪವಿತ್ರಾ ಲೋಕೇಶ್ 2023ರ ಹೊಸ ವರ್ಷದ ಹೊಸ್ತಿಲಿನಲ್ಲಿ ತಮ್ಮ ಮದುವೆಯ ವಿಚಾರವನ್ನು ವಿಶಿಷ್ಟವಾಗಿ ರೊಮ್ಯಾಂಟಿಕ್ ಆಗಿ ಬಹಿರಂಗಪಡಿಸಿದ್ದಾರೆ.

ಮೂಲತಃ ಕನ್ನಡತಿಯಾಗಿರುವ ಟಾಲಿವುಡ್ ನಲ್ಲಿ ಪೋಷಕ ನಟಿಯಾಗಿ ಹೆಸರು ಮಾಡಿರುವ ಪವಿತ್ರಾ ಲೋಕೇಶ್ 2023ರ ಹೊಸ ವರ್ಷದ ಹೊಸ್ತಿಲಿನಲ್ಲಿ ತಮ್ಮ ಮದುವೆಯ ವಿಚಾರವನ್ನು ವಿಶಿಷ್ಟವಾಗಿ ರೊಮ್ಯಾಂಟಿಕ್ ಆಗಿ ಬಹಿರಂಗಪಡಿಸಿದ್ದಾರೆ.

ಟಾಲಿವುಡ್ ನ ಖ್ಯಾತ ಪೋಷಕ ನಟ ನರೇಶ್(Naresh Tollywood) ಜೊತೆಗಿನ ಪವಿತ್ರಾ ಲೋಕೇಶ್(Pavitra Lokesh) ಸಂಬಂಧ ಕೆಲ ತಿಂಗಳ ಹಿಂದೆ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ನರೇಶ್ ಅವರ ಪತ್ನಿ ರಮ್ಯಾ ಇಬ್ಬರ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಮೈಸೂರಿನ ಹೊಟೇಲ್ ರೂಂನಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಉಳಿದುಕೊಂಡಿದ್ದ ವೇಳೆ ರಮ್ಯಾ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದ ನಂತರ ಪೊಲೀಸ್ ಠಾಣೆ ಮೆಟ್ಟಿಲೇರಿ ಆ ಸುದ್ದಿ ಅಲ್ಲಿಗೇ ತಣ್ಣಗಾಗಿತ್ತು.

ಇದೀಗ ಪವಿತ್ರ ಲೋಕೇಶ್ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆಯೊತ್ತಿದ್ದಾರೆ. ವಿಡಿಯೊವೊಂದನ್ನು ಬಿಡುಗಡೆ ಮಾಡಿರುವ ಅವರು ಅದರಲ್ಲಿ ನರೇಶ್ ಮತ್ತು ಪವಿತ್ರಾ ಕ್ಯಾಂಡಲ್ ಲೈಟ್ ಉರಿಸಿ ಕೇಕ್ ಕತ್ತರಿಸಿ ಇಬ್ಬರೂ ಒಬ್ಬರಿಗೊಬ್ಬರು ತಿನ್ನಿಸಿ ನರೇಶ್ ಪವಿತ್ರಾ ಅವರ ತುಟಿಗೆ ರೊಮ್ಯಾಂಟಿಕ್ ಆಗಿ ಮುತ್ತಿಡುತ್ತಿದ್ದಾರೆ. 2023ರ ಹೊಸ ವರ್ಷಕ್ಕೆ ಶುಭಾಶಯ ಕೋರುತ್ತಾ ಹೊಸ ವರ್ಷ, ಹೊಸ ಆರಂಭ ನಿಮ್ಮೆಲ್ಲರ ಶುಭಹಾರೈಕೆ ಬೇಕು, ನಾನು ಮತ್ತು ಪವಿತ್ರಾ ನರೇಶ್ ಸದ್ಯದಲ್ಲಿಯೇ ಮದುವೆಯಾಗಲಿದ್ದೇವೆ ಎಂದು ಪ್ರಕಟಿಸಿದ್ದಾರೆ.

ತೆಲುಗಿನ ಖ್ಯಾತ ಹಿರಿಯ ನಟ ದಿವಂಗತ ಕೃಷ್ಣ ಅವರ ಪುತ್ರ, ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅವರ ಮಲ ಸಹೋದರ ನರೇಶ್ ಅವರಿಗೆ ಇದು ನಾಲ್ಕನೇ ಮದುವೆಯಾದರೆ ಪವಿತ್ರಾ ಲೋಕೇಶ್ ಅವರಿಗೆ ಮೂರನೇ ಮದುವೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT