ಹಿರಿಯ ಕಲಾವಿದೆ ಹೇಮಲತಾ(ಸುಷ್ಮಾವೀರ್ ಅವರ ಫೇಸ್ ಬುಕ್ ಖಾತೆಯಿಂದ ಸಂಗ್ರಹ) 
ಸಿನಿಮಾ ಸುದ್ದಿ

ರಂಗಭೂಮಿ ದಂತಕಥೆ ಗುಬ್ಬಿ ವೀರಣ್ಣ ಮಗಳು ಹಿರಿಯ ಕಲಾವಿದೆ ಹೇಮಲತಾ ನಿಧನ

ಕನ್ನಡ ರಂಗಭೂಮಿಯ ದಂತಕಥೆ ಗುಬ್ಬಿ ವೀರಣ್ಣ ಪುತ್ರಿ ಜಿ.ವಿ ಹೇಮಲತಾ ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರು: ಕನ್ನಡ ರಂಗಭೂಮಿಯ ದಂತಕಥೆ ಗುಬ್ಬಿ ವೀರಣ್ಣ (Theatre Artist Gubbi Veeranna) ಪುತ್ರಿ ಜಿ.ವಿ ಹೇಮಲತಾ (Hemalatha) ಹೃದಯಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಸೋಮೇಶ್ವರ ಬಡವಾಣೆಯಲ್ಲಿ ಹೇಮಲತಾ ವಾಸಿಸುತ್ತಿದ್ದರು. ತನ್ನ ನಿವಾಸದಲ್ಲೇ ಹೇಮಲತಾ ಇಂದು ಬೆಳಗ್ಗೆ ಇಹಲೋಕ ತ್ಯಾಜಿಸಿದ್ದಾರೆ. ಹಿರಿಯ ರಂಗಭೂಮಿ ಕಲಾವಿದೆ ಜಯಶ್ರೀ ಅವರ ಮಗಳು ಸುಷ್ಮಾವೀರ್ ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯ ತಿಳಿಸಿದ್ದಾರೆ. 

ಜಿವಿ ಹೇಮಲತಾ ಅವರಿಗೆ ಎರಡು ದಿನಗಳ ಹಿಂದೆಯೇ ಲಘು ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಹೇಮಲತಾ ಕೊನೆಯುಸಿರೆಳೆದಿದ್ದಾರೆ. ಮೂಲತಃ ಭರತನಾಟ್ಯ ಕಲಾವಿದೆಯಾದ ಹೇಮಲತಾ ಅನೇಕ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಜೊತೆ ಎಮ್ಮೆ ತಮ್ಮಣ್ಣ ಸಿನಿಮಾದಲ್ಲಿ ಹೇಮಲತಾ ನಟಿಸಿದ್ದರು. ನಟ ಕಲ್ಯಾಣ್ ಕುಮಾರ್ ಜೊತೆ ಕಲಾವತಿ ಸಿನಿಮಾದಲ್ಲೂ ನಾಯಕಿಯಾಗಿ ಮಿಂಚಿದ್ದರು. ನಟ ಉದಯ್ ಸಿನಿಮಾದಲ್ಲಿಯೂ ನಟಿಸಿದ್ದರು. 

ಇವರಿಗೆ ಮೂವರು ಮಕ್ಕಳಿದ್ದು ಎಲ್ಲರೂ ಅಮೆರಿಕಾದಲ್ಲಿ ವಾಸವಿದ್ದಾರೆ. ಹೇಮಲತಾ ತನ್ನ ಸಹೋದರನ ಮಗಳು ಗುಬ್ಬಿ ವೀರಣ್ಣನವರ ಪುತ್ರ ಗುರುಸ್ವಾಮಿ ಅವರ ಪುತ್ರಿ ಜಯಭಾರತಿ ಅವರ ಮನೆಯಲ್ಲಿ ವಾಸವಾಗಿದ್ದರು.

ಹೇಮಲತಾ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಮತ್ತು ರಂಗಭೂಮಿ ದಿಗ್ಗಜರು ಸಂತಾಪ ಸೂಚಿಸಿದ್ದಾರೆ. ನಿರ್ದೇಶಕ ಪ್ರೀತಂ ಗುಬ್ಬಿ, ಹಿರಿಯ ನಟಿ, ರಂಗಭೂಮಿ ಕಲಾವಿದೆ ಜಯಶ್ರೀ ಸೇರಿದಂತೆ ಅನೇಕರ ಸಂತಾಪ ಸೂಚಿಸಿದ್ದಾರೆ. ಹೇಮಲತಾ ಮೃತದೇಹವನ್ನು ಬೆಂಗಳೂರಿನ ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಮೆಡಿಕಲ್ ಆಸ್ಪತ್ರೆಗೆ ದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 16 ಮಂದಿ ಸಾವು; ಸೇನೆ ನಿಯೋಜನೆ; Video!

ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಆಸ್ತಿಗಾಗಿ ತಂದೆಯ ಹತ್ಯೆ: ಮೃತದೇಹದ ಪಕ್ಕದಲ್ಲೇ ರಾತ್ರಿ ಕಳೆದ ಮಗ!

Couple Romance: ರೈಲಿನಲ್ಲಿ ಜನರ ಎದುರೆ ತಬ್ಬಿಕೊಂಡು ಚುಂಬಿಸಿ ಯುವ ಜೋಡಿ 'ರಾಸಲೀಲೆ'; ಮುಜುಗರಕ್ಕೀಡಾದ ಪ್ರಯಾಣಿಕರು, Video!

ಮತ್ತೆ ಅಬ್ಬರಿಸಲಿದ್ದಾನೆ ಮಳೆರಾಯ: 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ

SCROLL FOR NEXT