ಅನೂಪ್ ಭಂಡಾರಿ 
ಸಿನಿಮಾ ಸುದ್ದಿ

ಹಿಂದಿಗೆ ರಿಮೇಕ್ ಆಗಲಿದೆ ನಿರ್ದೇಶಕ ಅನುಪ್ ಭಂಡಾರಿ ಚೊಚ್ಚಲ ಕನ್ನಡ ಚಿತ್ರ 'ರಂಗಿತರಂಗ'!

ನಾನು ಇಂದು ಏನಾಗಿರುವೆನು ಅದಕ್ಕೆಲ್ಲಾ ಏಳು ವರ್ಷಗಳ ಹಿಂದೆ ನೀವು ನಮ್ಮ ಮೇಲೆ ಹರಿಸಲು ಪ್ರಾರಂಭಿಸಿದ ಪ್ರೀತಿಯಿಂದಾಗಿ" ಎಂದು ಅನುಪ್ ಭಂಡಾರಿ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ

ನಿರ್ದೇಶಕ ಅನುಪ್ ಭಂಡಾರಿ ಅವರ ಚೊಚ್ಚಲ ಚಿತ್ರ ರಂಗಿತರಂಗ ಜುಲೈ 3 ರಂದು ಏಳನೇ ವರ್ಷಕ್ಕೆ ಕಾಲಿಡುತ್ತಿದೆ.

ನಾನು ಇಂದು ಏನಾಗಿರುವೆನು ಅದಕ್ಕೆಲ್ಲಾ  ಏಳು ವರ್ಷಗಳ ಹಿಂದೆ ನೀವು ನಮ್ಮ ಮೇಲೆ ಹರಿಸಲು ಪ್ರಾರಂಭಿಸಿದ ಪ್ರೀತಿಯಿಂದಾಗಿ" ಎಂದು ಅನುಪ್ ಭಂಡಾರಿ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ, ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಧನ್ಯವಾದ ಎಂದು ಹೇಳಿದ್ದಾರೆ.

ರಂಗಿತರಂಗ ಚಿತ್ರದ ಹಿಂದಿ ರಿಮೇಕ್ ಸಾಧ್ಯತೆಯ ಬಗ್ಗೆ ಹಲವು ದಿನಗಳಿಂದ ವದಂತಿ ಹರಿದಾಡುತ್ತಿವೆ. ಸದ್ಯ ಈ ವದಂತಿ ಖಚಿತವಾಗಿದೆ. ಇತ್ತೀಚಿನ ಬೆಳವಣಿಗೆಯ ಪ್ರಕಾರ, ದೊಡ್ಡ ನಿರ್ಮಾಪಕರೊಬ್ಬರು ರಂಗಿತರಂಗವನ್ನು ಹಿಂದಿಯಲ್ಲಿ ಹೊರತರಲು ಉತ್ಸುಕರಾಗಿದ್ದಾರೆ ಮತ್ತು ಮುಂಬೈನ ಕಾರ್ಪೊರೇಟ್ ಸ್ಟುಡಿಯೋಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನಿರ್ಮಾಪಕರು ಹಿಂದಿ ರೀಮೇಕ್  ರಂಗಿತರಂಗ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಮಾಡಲು ಬಯಸುತ್ತಿದ್ದು, ಪ್ರಮುಖ ಪಾತ್ರದಲ್ಲಿ ಅಕ್ಷಯ್ ಕುಮಾರ್ ಮತ್ತು ಶಾಹಿದ್ ಕಪೂರ್ ರನ್ನು ಕರೆತರಲು ಯೋಜಿಸಿದ್ದಾರೆ. 

ಕನ್ನಡ ಚಿತ್ರರಂಗದ ಅಭಿಮಾನಿಗಳಲ್ಲಿ ನೆಚ್ಚಿನ ಚಿತ್ರವಾಗಿ ಮುಂದುವರೆದಿರುವ ರಂಗಿತರಂಗ, ಅನುಪ್ ಅವರ ಸಹೋದರ ನಿರೂಪ್ ಭಂಡಾರಿ ಮತ್ತು ಆವಂತಿಕಾ ಶೆಟ್ಟಿ ಅವರ ಅಭಿನಯದ ಚೊಚ್ಚಲ ಚಿತ್ರವಾಗಿದೆ. ಚಿತ್ರದಲ್ಲಿ ರಾಧಿಕಾ ನಾರಾಯಣ್ ಮತ್ತು ಸಾಯಿ ಕುಮಾರ್ ಪ್ರಮುಖ ಪಾತ್ರ ನಿರ್ವಹಿಸಿದ್ದರು, ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ಅನೂಪ್ ಭಂಡಾರಿ ಪ್ರಸ್ತುತ ವಿಕ್ರಾಂತ್ ರೋಣ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ, ನಂತರ ಸುದೀಪ್ ನಟನೆಯ ಬಿಲ್ಲಾ ರಂಗ ಬಾಷಾಕ್ಕಾಗಿ ಕೆಲಸ ಮಾಡುತ್ತಾರೆ. ಹಾಗಾಗಿ ಹಿಂದಿಯಲ್ಲಿ ರಂಗಿತರಂಗ ರೀಮೇಕ್ ಅನ್ನು ಅನುಪ್ ಭಂಡಾರಿ ನಿರ್ದೇಶಿಸುತ್ತಾರೋ ಇಲ್ಲವೋ ಎಂಬುದು ಖಚಿತವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT