ಕಾಳಿ ಸಾಕ್ಷ್ಯಚಿತ್ರದ ಪೋಸ್ಚರ್ 
ಸಿನಿಮಾ ಸುದ್ದಿ

’ಕಾಳಿ’ ಮಾತೆ ಕೈಯಲ್ಲಿ ಸಿಗರೇಟು; ವಿವಾದಕ್ಕೀಡಾದ ನಿರ್ದೇಶಕಿ ಲೀನಾ, ಹಿಂದೂಪರ ಸಂಘಟನೆಗಳ ಆಕ್ರೋಶ

ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಚೆನ್ನೈ: ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ. 

ಹೌದು.. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ಟ್ವಿಟರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನ ಲೀನಾ ಮಣಿಮೇಕಲೈ ಅವರು ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದು, ಶನಿವಾರ ಅವರು ಈ ಸಾಕ್ಷ್ಯಚಿತ್ರದ ಪೋಸ್ಟರ್‌ ಅನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಹಿಂದೂ ದೇವತೆ ಕಾಳಿ ಮಾತೆ ಸಿಗರೇಟ್ ಸೇದುತ್ತಿರುವುದು ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂb(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ. 

ಈ ಪೋಸ್ಟರ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಲೀನಾ ಮಣಿಮೇಕಲೈ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಟ್ವಿಟರ್‌ನಲ್ಲಿ ಅರೆಸ್ಟ್‌ ಲೀನಾ ಮಣಿಮೇಕಲೈ (#ArrestLeenaManimekalai) ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಸಾವಿರಾರು ಬಳಕೆದಾರರು ಲೀನಾ ಅವರನ್ನು ಬಂಧಿಸಬೇಕು ಎಂದು ಪ್ರಧಾನ ಮಂತ್ರಿ ಕಚೇರಿಗೆ ಮನವಿ ಮಾಡಿದ್ದಾರೆ. 

2021 ರಲ್ಲಿ, ಸೈಫ್ ಅಲಿ ಖಾನ್ ಅಭಿನಯದ ವೆಬ್ ಸರಣಿ 'ತಾಂಡವ್' ನಲ್ಲಿ ಹಿಂದೂ ದೇವರುಗಳನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂಬ ಕಾರಣಕ್ಕಾಗಿ ಧಾರ್ಮಿಕ ಉದ್ವಿಗ್ನತೆಯ ಸಾಧ್ಯತೆಯನ್ನು ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT