ಕಾಳಿ ಸಾಕ್ಷ್ಯಚಿತ್ರದ ಪೋಸ್ಚರ್ 
ಸಿನಿಮಾ ಸುದ್ದಿ

’ಕಾಳಿ’ ಮಾತೆ ಕೈಯಲ್ಲಿ ಸಿಗರೇಟು; ವಿವಾದಕ್ಕೀಡಾದ ನಿರ್ದೇಶಕಿ ಲೀನಾ, ಹಿಂದೂಪರ ಸಂಘಟನೆಗಳ ಆಕ್ರೋಶ

ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ಚೆನ್ನೈ: ಹಿಂದೂಗಳ ದೇವತೆ ಕಾಳಿಮಾತೆಯನ್ನು ವಿವಾದಾತ್ಮಕವಾಗಿ ಚಿತ್ರಿಸಿದ ಆರೋಪದ ಮೇರೆಗೆ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ. 

ಹೌದು.. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟಿ, ನಿರ್ದೇಶಕಿ, ಕವಯತ್ರಿ ಲೀನಾ ಮಣಿಮೇಕಲೈ ವಿರುದ್ಧ ಟ್ವಿಟರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಮಿಳುನಾಡಿನ ಲೀನಾ ಮಣಿಮೇಕಲೈ ಅವರು ‘ಕಾಳಿ‘ ಎಂಬ ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ್ದು, ಶನಿವಾರ ಅವರು ಈ ಸಾಕ್ಷ್ಯಚಿತ್ರದ ಪೋಸ್ಟರ್‌ ಅನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಹಿಂದೂ ದೇವತೆ ಕಾಳಿ ಮಾತೆ ಸಿಗರೇಟ್ ಸೇದುತ್ತಿರುವುದು ಹಾಗೂ ಕೈಯಲ್ಲಿ ಎಲ್‌ಜಿಬಿಟಿಕ್ಯೂb(LGBTQ) ಸಮುದಾಯದ ಧ್ವಜವನ್ನು ಹಿಡಿದಿರುವ ಅವತಾರದಲ್ಲಿ ತೋರಿಸಲಾಗಿದೆ. 

ಈ ಪೋಸ್ಟರ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಲೀನಾ ಮಣಿಮೇಕಲೈ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗುತ್ತಿದೆ. ಟ್ವಿಟರ್‌ನಲ್ಲಿ ಅರೆಸ್ಟ್‌ ಲೀನಾ ಮಣಿಮೇಕಲೈ (#ArrestLeenaManimekalai) ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಸಾವಿರಾರು ಬಳಕೆದಾರರು ಲೀನಾ ಅವರನ್ನು ಬಂಧಿಸಬೇಕು ಎಂದು ಪ್ರಧಾನ ಮಂತ್ರಿ ಕಚೇರಿಗೆ ಮನವಿ ಮಾಡಿದ್ದಾರೆ. 

2021 ರಲ್ಲಿ, ಸೈಫ್ ಅಲಿ ಖಾನ್ ಅಭಿನಯದ ವೆಬ್ ಸರಣಿ 'ತಾಂಡವ್' ನಲ್ಲಿ ಹಿಂದೂ ದೇವರುಗಳನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂಬ ಕಾರಣಕ್ಕಾಗಿ ಧಾರ್ಮಿಕ ಉದ್ವಿಗ್ನತೆಯ ಸಾಧ್ಯತೆಯನ್ನು ಸೃಷ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT