ವಿಕ್ರಾಂತ್ ರೋಣ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ವಿಕ್ರಾಂತ್ ರೋಣನ 'ಲಾಲಿ' ಹಾಡಿನಲ್ಲಿ ತಂದೆಯ ಪ್ರಾಮಾಣಿಕತೆ ಮತ್ತು ಬೇಷರತ್ತಾದ ಪ್ರೀತಿಯಿದೆ: ಸುದೀಪ್

ಅಪ್ಪ–ಮಗಳ ನಡುವಿನ ದಟ್ಟ ಬಾಂಧವ್ಯವನ್ನು ಮೈತುಂಬಿಕೊಂಡಿರುವ ಹಾಡಿಗೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಧ್ವನಿಯಾಗಿದ್ದಾರೆ. 

ಬೆಂಗಳೂರು: ಕಿಚ್ಚ ಸುದೀಪ್‌ ಅಭಿನಯದ ‘ವಿಕ್ರಾಂತ್‌ ರೋಣ’ ಚಿತ್ರದ ಎರಡನೇ ಹಾಡು ಶನಿವಾರ ಸಂಜೆ ಬಿಡುಗಡೆಯಾಗಿದೆ. ಅಪ್ಪ–ಮಗಳ ನಡುವಿನ ದಟ್ಟ ಬಾಂಧವ್ಯವನ್ನು ಮೈತುಂಬಿಕೊಂಡಿರುವ ಹಾಡಿಗೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಧ್ವನಿಯಾಗಿದ್ದಾರೆ. 

ನಿರ್ದೇಶಕ ಅನೂಪ್‌ ಬಂಡಾರಿ ಬರೆದಿರುವ ಸಾಹಿತ್ಯಕ್ಕೆ, ಅಜನೀಶ್‌ ಲೋಕನಾಥ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅದ್ದೂರಿ ಸೇಟ್‌ಗಳ ನಡುವೆ ಕಣ್ಮನ ಸೆಳೆಯುವ ಕಿಚ್ಚ ಸುದೀಪ್‌ ಹಾಗೂ ಪುಟ್ಟ ಮಗುವಿನ ಭಾವನಾತ್ಮಕ ಮಿಡಿತಗಳು ಪ್ರೇಕ್ಷಕರನ್ನು ಗಾಢವಾಗಿ ಸೆಳೆಯುತ್ತವೆ. 

ತಣ್ಣನೆ ಬೀಸೋ ಗಾಳಿ, ಹಾಡಿದೆ ಜೋಜೋ ಲಾಲಿ. ಈ ನನ್ನ ಮಡಿಲೆ ನಿನ್ನಾ ತೂಗೋ ಉಯ್ಯಾಲೆ, ತೂಗೋ ಉಯ್ಯಾಲೆ’ ಎಂದು ಶುರುವಾಗುವ ಗೀತೆಯು, ‘ಕಣ್ಣಿನ ರೆಪ್ಪೆ ಮುಚ್ಚಿ, ನಿದ್ದೆಗೆ ಬೇಗ ಜಾರಿ, ಮಲಗೆ ಮಲಗೆ ನನ್ನ ಮುದ್ದು ಬಂಗಾರಿ, ಮುದ್ದು ಬಂಗಾರಿ’ ಎನ್ನುವಲ್ಲಿಗೆ ಕೊನೆಗೊಳ್ಳುತ್ತದೆ.

ಇದು ತಂದೆಯ ಪ್ರಾಮಾಣಿಕ ಮತ್ತು ಬೇಷರತ್ತಾದ ಪ್ರೀತಿ. ತೆರೆಯ ಮೇಲೆ ಮಗಳ ಜೊತೆಗಿನ ನನ್ನ ಸಂಬಂಧ, ಈ ಹಾಡನ್ನು ಮಾಡಬೇಕೆಂಬ ನನ್ನ ಮನಃಸ್ಥಿತಿ, ಸೆಟ್, ವಾತಾವರಣ ಮತ್ತು ಸ್ಕ್ರಿಪ್ಟ್... ಎಲ್ಲವೂ ಈ ಹಾಡಿಗೆ ಒಗ್ಗೂಡಿವೆ ಎಂದು ಸಿನಿಮಾ ಎಕ್ಸ್ ಪ್ರೆಸ್ ಗೆ ಕಿಚ್ಚ ಸುದೀಪ್ ತಿಳಿಸಿದ್ದಾರೆ.

ವಿಕ್ರಾಂತ್ ರೋಣ ಆಕ್ಷನ್-ಪ್ಯಾಕ್ಡ್ ಫ್ಯಾಂಟಸಿ ಎಂಟರ್‌ಟೈನರ್ ಎಂದು ಬಿಂಬಿಸಲಾಗಿದ್ದರೂ, ಇದು ತಂದೆ-ಮಗಳ ನಡುವಿನ ಸಂಬಂಧದ ಬಾಂಧವ್ಯದ ಬಗ್ಗೆ ಒಂದು ಭಾಗ ಭಾವನಾತ್ಮಕ ಚಿತ್ರ ಎಂದು ಹೇಳಲಾಗಿದೆ.

ಮಂಜುನಾಥ ಗೌಡ ಅವರ ಶಾಲಿನಿ ಆರ್ಟ್ಸ್ ಬ್ಯಾನರ್ ಮತ್ತು ಅಲಂಕಾರ್ ಪಾಂಡಿಯನ್ ಅವರ ವಿಕ್ರಾಂತ್ ರೋಣ ಜುಲೈ 28 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡೀಸ್ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT