ಕನ್ನಡದ ಮೂರು ಚಿತ್ರಗಳಿಗೆ ರಾಷ್ಟ್ರಪ್ರಶಸ್ತಿ ಗರಿ 
ಸಿನಿಮಾ ಸುದ್ದಿ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸಂಚಾರಿ ವಿಜಯ್ ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ

ಶುಕ್ರವಾರ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ.

ನವದೆಹಲಿ: ಶುಕ್ರವಾರ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ.

ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಮತ್ತೊಮ್ಮೆ ವಿಜಯ್ ನ್ಯಾಷನಲ್ ಅವಾರ್ಡ್ ಪಡೆಯುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಿನಿಮಾಗೆ ಈ ಬಾರಿ ಪ್ರಶಸ್ತಿ ಸಂದಿದೆ.

ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ. 

ಈ ಹಿಂದೆ ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ ‘ನಾನು ಅವನಲ್ಲ ಅವಳು’ ಸಿನಿಮಾಗಾಗಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಅಲ್ಲದೇ, ವಿಜಯ್ ನಟನೆಯ ನಾಲ್ಕು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಮೂರು ಸಿನಿಮಾಗಳಿಗೆ ಮತ್ತು ಒಂದು ಚಿತ್ರಕ್ಕಾಗಿ ವಿಜಯ್ ವೈಯಕ್ತಿಕ ಪ್ರಶಸ್ತಿ ಪಡೆದಿದ್ದಾರೆ. 

ಪ್ರಶಸ್ತಿ ಪಡೆದ ಕರ್ನಾಟಕದ ಚಿತ್ರಗಳು
ಅತ್ಯುತ್ತಮ ಪರಿಸರ ಕಾಳಜಿ ಚಿತ್ರ: ತಲೆದಂಡ
ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ: ಡೊಳ್ಳು
ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ: ನಾದದ ನವನೀತ
ಅತ್ಯುತ್ತಮ ಪ್ರಾದೇಶಿಕ ಸಿನಿಮಾ: ಡೊಳ್ಳು
ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ: ಜೀಟಿಗೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT