ಕೆಜಿಎಫ್ 100 ದಿನದ ಸಂಭ್ರಮ 
ಸಿನಿಮಾ ಸುದ್ದಿ

100 ದಿನ ಪೂರೈಸಿದ ಕೆಜಿಎಫ್-2: ಇದು ಕೇವಲ ಆರಂಭ ಎಂದು ನಿರ್ಮಾಪಕ!

ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್​ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್​ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಈ ಖುಷಿಯನ್ನು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ಸಂಭ್ರಮಿಸಿದೆ. ಇಷ್ಟು ದೊಡ್ಡ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಲಾಗಿದೆ. ‘ಕೆಜಿಎಫ್​ 2’ ಚಿತ್ರದ ಪ್ರಮುಖ ತುಣುಕುಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ 100 ದಿನಗಳ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲಾಗಿದೆ. ಇಂಥ ಅಭೂತಪೂರ್ವ ಗೆಲುವಿಗೆ ಕಾರಣರಾದ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್ ಕಿರಗಂದೂರು ಟ್ವೀಟ್ ಮಾಡಿ, ಅಭಿಮಾನಿಗಳ ಜೊತೆ ತಾವು ಎಷ್ಟು ಹೆಮ್ಮೆಪಡುತ್ತಿದ್ದೇವೆಂದು ಎಂದು ಹಂಚಿಕೊಂಡಿದ್ದು, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.“ನಮಗಾಗಿ ಈ ಅದ್ಭುತ ಪ್ರಯಾಣವನ್ನು ಸ್ಕ್ರಿಪ್ಟ್ ಮಾಡಿದ್ದಕ್ಕೆ ಧನ್ಯವಾದಗಳು. ನಾವು ಇನ್ನೂ ಇದೇ ರೀತಿಯ ಅದ್ಬುತ ಪ್ರಾಜೆಕ್ಟ್​ಗಳನ್ನು ನೀಡಲು ಸಿದ್ದರಿದ್ದೇವೆ ಎಂದು ಭರವಸೆ ನೀಡುತ್ತೇವೆ ಎಂದು ಬರೆದುಕೊಂಡಿದೆ.

ಕೆಜಿಎಫ್ ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಯಿತು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಕಂಡ ಈ ಚಿತ್ರಕ್ಕೆ ಎಲ್ಲ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಈ ವರ್ಷ ಬಹುದೊಡ್ಡ ಓಪನಿಂಗ್​ ಪಡೆದುಕೊಂಡ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ್ದಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!