ಕೆಜಿಎಫ್ 100 ದಿನದ ಸಂಭ್ರಮ 
ಸಿನಿಮಾ ಸುದ್ದಿ

100 ದಿನ ಪೂರೈಸಿದ ಕೆಜಿಎಫ್-2: ಇದು ಕೇವಲ ಆರಂಭ ಎಂದು ನಿರ್ಮಾಪಕ!

ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್​ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಭಾರತೀಯ ಸಿನಿಮಾ ಮಾರುಕಟ್ಟೆಯಲ್ಲಿ ಎಲ್ಲಾ ದಾಖಲೆ, ನೀರಿಕ್ಷೆಗಳನ್ನು ಮೀರಿ ಯಶಸ್ಸು ಕಂಡಿದ್ದ ಸಿನಿಮಾ ಎಂದರೆ ಕೆಜಿಎಫ್​ 2. ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡಿದ್ದ ಸಿನಿಮಾ ನೂರು ದಿನ ಪೂರೈಸಿದೆ.

ಈ ಖುಷಿಯನ್ನು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ಸಂಭ್ರಮಿಸಿದೆ. ಇಷ್ಟು ದೊಡ್ಡ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಲಾಗಿದೆ. ‘ಕೆಜಿಎಫ್​ 2’ ಚಿತ್ರದ ಪ್ರಮುಖ ತುಣುಕುಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ 100 ದಿನಗಳ ಯಶಸ್ವಿ ಪ್ರಯಾಣವನ್ನು ಸಂಭ್ರಮಿಸಲಾಗಿದೆ. ಇಂಥ ಅಭೂತಪೂರ್ವ ಗೆಲುವಿಗೆ ಕಾರಣರಾದ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್ ಕಿರಗಂದೂರು ಟ್ವೀಟ್ ಮಾಡಿ, ಅಭಿಮಾನಿಗಳ ಜೊತೆ ತಾವು ಎಷ್ಟು ಹೆಮ್ಮೆಪಡುತ್ತಿದ್ದೇವೆಂದು ಎಂದು ಹಂಚಿಕೊಂಡಿದ್ದು, ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.“ನಮಗಾಗಿ ಈ ಅದ್ಭುತ ಪ್ರಯಾಣವನ್ನು ಸ್ಕ್ರಿಪ್ಟ್ ಮಾಡಿದ್ದಕ್ಕೆ ಧನ್ಯವಾದಗಳು. ನಾವು ಇನ್ನೂ ಇದೇ ರೀತಿಯ ಅದ್ಬುತ ಪ್ರಾಜೆಕ್ಟ್​ಗಳನ್ನು ನೀಡಲು ಸಿದ್ದರಿದ್ದೇವೆ ಎಂದು ಭರವಸೆ ನೀಡುತ್ತೇವೆ ಎಂದು ಬರೆದುಕೊಂಡಿದೆ.

ಕೆಜಿಎಫ್ ಚಾಪ್ಟರ್​ 2’ ಸಿನಿಮಾ ಬಿಡುಗಡೆ ಆಯಿತು. ಕನ್ನಡ, ಹಿಂದಿ, ಮಲಯಾಳಂ, ತಮಿಳು, ತೆಲುಗು ಭಾಷೆಗಳಲ್ಲಿ ತೆರೆಕಂಡ ಈ ಚಿತ್ರಕ್ಕೆ ಎಲ್ಲ ರಾಜ್ಯದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಈ ವರ್ಷ ಬಹುದೊಡ್ಡ ಓಪನಿಂಗ್​ ಪಡೆದುಕೊಂಡ ಸಿನಿಮಾ ಎಂಬ ಖ್ಯಾತಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ್ದಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT