ವಿನೋದ್ ಪ್ರಭಾಕರ್ 
ಸಿನಿಮಾ ಸುದ್ದಿ

'ಮಾದೇವ'ನಾಗಿ ವಿನೋದ್ ಪ್ರಭಾಕರ್!

ಚಿರಂಜೀವಿ ಸರ್ಜಾ ಅವರ ಖಾಕಿ ಚಿತ್ರದ ಮೂಲಕ  ಚೊಚ್ಚಲ ನಿರ್ದೇಶಕನಾಗಿ ಗುರುತಿಕೊಂಡ ನವೀನ್ ರೆಡ್ಡಿ ಬಿ, ಈಗ ವಿನೋದ್ ಪ್ರಭಾಕರ್ ಮುಖ್ಯ ಭೂಮಿಕೆಯಲ್ಲಿರುವ ಅವರ ಎರಡನೇ ಸಿನಿಮಾ ನಿರ್ದೇಶನ ಮಾಡಲು ಸಿದ್ಧರಾಗಿದ್ದಾರೆ.

ಚಿರಂಜೀವಿ ಸರ್ಜಾ ಅವರ ಖಾಕಿ ಚಿತ್ರದ ಮೂಲಕ  ಚೊಚ್ಚಲ ನಿರ್ದೇಶಕನಾಗಿ ಗುರುತಿಕೊಂಡ ನವೀನ್ ರೆಡ್ಡಿ ಬಿ, ಈಗ ವಿನೋದ್ ಪ್ರಭಾಕರ್ ಮುಖ್ಯ ಭೂಮಿಕೆಯಲ್ಲಿರುವ ಅವರ ಎರಡನೇ ಸಿನಿಮಾ ನಿರ್ದೇಶನ ಮಾಡಲು ಸಿದ್ಧರಾಗಿದ್ದಾರೆ.

ಮಾದೇವ ಎಂಬ ಶೀರ್ಷಿಕೆಯ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಸಿನಿಮಾದ ಕೆಲವು ಸ್ಟಿಲ್ ಗಳನ್ನು ಸಿನಿಮಾ ಎಕ್ಸ್ ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ.

ಇದು 80 ರ ದಶಕದ ಕಥೆಯನ್ನು ಒಳಗೊಂಡಿದ್ದು, ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೊಂದು ಭಾವಾನಾತ್ಮಕ ಕಥೆಯಾಗಿದೆ. ಜೈಲು ಮತ್ತು ರೈಲಿನ ಹಿನ್ನೆಲೆಯಲ್ಲಿ ಕಥೆ ಸಾಗುತ್ತದೆ ಎಂದು  ನಿರ್ದೇಶಕ ನವೀನ್ ರೆಡ್ಡಿ ತಿಳಿಸುತ್ತಾರೆ.

ಜುಲೈ 21 ರಂದು ಚಿತ್ರ ಸೆಟ್ಟೇರಲಿದ್ದು, ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಯಲಿದೆ.ಬಾಲಕೃಷ್ಣ ತೋಟ ಛಾಯಾಗ್ರಹಣವಿದೆ. ನಿರ್ಮಾಪಕಿ ಗಾಯತ್ರಿ ಆರ್ ಹಳಲೆ ನಿರ್ಮಿಸಿರುವ ಈ ಚಿತ್ರಕ್ಕೆ ಪ್ರದ್ದ್ಯೋತ್ತನ್ ಸಂಗೀತ ನೀಡಲಿದ್ದಾರೆ.

ಶೃತಿ, ಅಚ್ಯುತ್ ಕುಮಾರ್ ಮತ್ತು ಶುದ್ದಿ ಚಿತ್ರಕ್ಕಾಗಿ ಆಯ್ಕೆಯಾಗಿದ್ದಾರೆ. ಏತನ್ಮಧ್ಯೆ, ರಾಬರ್ಟ್‌ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡ ವಿನೋದ್ ಪ್ರಭಾಕರ್ ಅವರ ಮುಂದಿನ ಚಿತ್ರ ಲಂಕಾ ಸುರ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ನಾಯಕಿ ಪಾತ್ರಕ್ಕಾಗಿ ಇನ್ನೂ ಆಯ್ಕೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT