ವೇದಾ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ನಟನೆಯ 125ನೇ ಚಿತ್ರ 'ವೇದಾ': ಜಿ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ

ಹ್ಯಾಟ್ರಿಕ್ ಹೀರೋ ಶಿವ ರಾಜಕುಮಾರ್ ಅಭಿನಯದ 125ನೇ ಚಿತ್ರ ವೇದಾ ಸಿನಿಮಾದ ಮೋಷನ್ ಪೋಸ್ಟರ್​ ಬಿಡುಗಡೆಯಾಗಿದೆ. ವಿಶೇಷ ಎಂದರೆ ಈ ಚಿತ್ರದ ಮೂಲಕ ಶಿವರಾಜ್​ ಕುಮಾರ್ ಸ್ಯಾಂಡಲ್​ವುಡ್​ಗೆ ನಿರ್ಮಾಪಕರಾಗಿ ಅಡಿಯಿಡುತ್ತಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವ ರಾಜಕುಮಾರ್ ಅಭಿನಯದ 125ನೇ ಚಿತ್ರ ವೇದಾ ಸಿನಿಮಾದ ಮೋಷನ್ ಪೋಸ್ಟರ್​ ಬಿಡುಗಡೆಯಾಗಿದೆ. ವಿಶೇಷ ಎಂದರೆ ಈ ಚಿತ್ರದ ಮೂಲಕ ಶಿವರಾಜ್​ ಕುಮಾರ್ ಸ್ಯಾಂಡಲ್​ವುಡ್​ಗೆ ನಿರ್ಮಾಪಕರಾಗಿ ಅಡಿಯಿಡುತ್ತಿದ್ದಾರೆ.

ವೇದಾ ಚಿತ್ರವನ್ನು ಝೀ ಸ್ಟುಡಿಯೋಸ್​ ಜೊತೆಗೂಡಿ ಗೀತಾ ಸ್ಟುಡಿಯೋಸ್ ಮೂಲಕ ಗೀತಾ ಶಿವರಾಜ್ ಕುಮಾರ್ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಭಜರಂಗಿ ಹರ್ಷ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಹಾಗೆಯೇ ಇದು ಶಿವಣ್ಣ-ಹರ್ಷ ಜೋಡಿಯ 4ನೇ ಚಿತ್ರ ಎಂಬುದು ಮತ್ತೊಂದು ವಿಶೇಷ. ಇದೇ ಕಥೆಯ ಮೂಲಕ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿಯಾಗಿ ಹೊಸ ಹೆಜ್ಜೆಯಿಡಲು ಮುಂದಾಗಿದ್ದಾರೆ.

ಇನ್ನು ವೇದಾ ಚಿತ್ರವು 1960ರ ದಶಕದಲ್ಲಿ ನಡೆಯುವ ಕಥೆಹಂದರ ಹೊಂದಿದೆ. ಮೋಷನ್ ಪೋಸ್ಟರ್ ಅನ್ನು ಕಿಚ್ಚಿನ ನಡುವೆ ರೂಪಿಸಲಾಗಿದ್ದು, ಇದಾಗ್ಯೂ ಚಿತ್ರಕಥೆ ಹೇಗೆ ಸಾಗಲಿದೆ ಎಂಬುದರ ಬಗ್ಗೆ ನಿರ್ದೇಶಕರು ಯಾವುದೇ ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ. ಈ ಚಿತ್ರದಲ್ಲಿ ಶಿವಣ್ಣನ ಮಗಳಾಗಿ ಅರುಣ್ ಸಾಗರ್ ಅವರ ಪುತ್ರಿ ಅದಿತಿ ಸಾಗರ್​ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗೆಯೇ ನಾಯಕಿಯಾಗಿ ಮಗಳು ಜಾನಕಿ ನಟಿ ಗಾನವಿ ಬಣ್ಣ ಹಚ್ಚಲಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮ್ರಾಶ್ರೀ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಎ. ಹರ್ಷ ನಿರ್ದೇಶನದ ಚಿತ್ರವಿದು. ಶಿವಣ್ಣ ಜೊತೆ ವಜ್ರಕಾಯ, ಭಜರಂಗಿ ಮತ್ತು ಭಜರಂಗಿ 2 ನಿರ್ದೇಶನ ಮಾಡಿ ಮೂರೂ ಚಿತ್ರಗಳಲ್ಲಿ ಗೆದ್ದಿರುವ ಹರ್ಷ ಈಗನ ಅವರ 4ನೇ ಚಿತ್ರ ನಿರ್ದೇಶಿಸುತ್ತಿದ್ದಾರೆ. 1960ರ ದಶಕದಲ್ಲಿ ನಡೆಯುವ ಕಥೆಯೊಂದನ್ನು ಹೆಣೆದಿದ್ದಾರೆ ಹರ್ಷ. ಭರ್ಜರಿ ಸ್ಟುಡಿಯೋ ಸೆಟ್ ಹಾಕಿರುವ ಹರ್ಷ, ಚಿತ್ರದ ಯಾವೊಂದು ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ. ವೇದಾ ಬಹುಭಾಷಾ ಚಿತ್ರವಾಗಿದ್ದು,  ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT