ಅನುಷ್ಕಾ ಶೆಟ್ಟಿ 
ಸಿನಿಮಾ ಸುದ್ದಿ

ಜೀವ ಬೆದರಿಕೆ ಕೇಸ್: ಮಂಗಳೂರು ಪೊಲೀಸರ ಮುಂದೆ ಅನುಷ್ಕಾ ಶೆಟ್ಟಿ ಸಹೋದರನ ಹೇಳಿಕೆ   

ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡರು.

ಮಂಗಳೂರು: ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನ್ನ ಜೀವಕ್ಕೆ ಅಪಾಯ ಇರುವ ಬಗ್ಗೆ ನಂಬಲರ್ಹ ಮೂಲಗಳಿಂದ ಮಾಹಿತಿ ಸಿಕ್ಕಿತ್ತು. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದೆ. ಈ ಪ್ರಕರಣವನ್ನು ಮಂಗಳೂರಿನ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಾಗಾಗಿ ಪೊಲೀಸ್‌ ಕಮಿಷನರ್‌ ಹಾಗೂ ಇತರ ಅಧಿಕಾರಿಗಳನ್ನು ಭೇಟಿಯಾಗಿದ್ದೆ. ಅವರು ತನಿಖೆಗೆ ಅಗತ್ಯವಿರುವ ಕೆಲವು ಮಾಹಿತಿಗಳನ್ನು ನನ್ನಿಂದ ಪಡೆದುಕೊಂಡರು’ ಎಂದು ತಿಳಿಸಿದರು.ರು.

ಇನ್ನು, ತನಗೆ ಜೀವ ಬೆದರಿಕೆ ಇದೆ ಎಂದು ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಗೃಹ ಸಚಿವರ ಬಳಿ ಹೋಗಿ ಮನವಿ ಸಲ್ಲಿಸಿದ್ದರು. ಹೀಗಾಗಿ ಎಡಿಜಿಪಿಯವರು ನಮಗೆ ಈ ಕುರಿತು ಮಾಹಿತಿ ನೀಡಿದ್ದರು. ಆದರೆ, ಅವರು ಕೊಟ್ಟ ಮನವಿಯಲ್ಲಿ ನಿರ್ದಿಷ್ಟ ‌ಮಾಹಿತಿ ಇರಲಿಲ್ಲ.

ಯಾರಿಂದ ಬೆದರಿಕೆ ಇದೆ, ಯಾತಕ್ಕಾಗಿ ಬೆದರಿಕೆ ಇದೆ ಎಂದು ಹೇಳಿರಲಿಲ್ಲ. ಆದರೆ, ಅವರ ರಿಲೈಬಲ್ ಸೋರ್ಸ್ ಮೂಲಕ ಬಂದ ಮಾಹಿತಿಯಂತೆ ಅವರು ದೂರು ಕೊಟ್ಟಿದ್ರು. ಅವರು ಯಾರೂಂತ ಪತ್ತೆ ಹಚ್ಚಬೇಕು, ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದರು. ಹೀಗಾಗಿ ಅವರನ್ನು ಹೆಚ್ಚಿನ ಮಾಹಿತಿಗಾಗಿ ಇಂದು ವಿಚಾರಣೆಗೆ ಕರೆದಿದ್ದೀವಿ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT