ಭರತ್ ಕಲ್ಯಾಣ್ ಪತ್ನಿ ಪ್ರಿಯದರ್ಶಿನಿ 
ಸಿನಿಮಾ ಸುದ್ದಿ

ಡಯಟ್ ಪ್ಲಾನ್ ಬದಲಾವಣೆ ತಂದ ಆಪತ್ತು: ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ!

ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

ಚೆನ್ನೈ: ಅನೇಕರು ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ದೇಹದ ಫಿಟ್​ನೆಸ್​ ಸರಿಯಾಗಿ ಕಾಪಾಡಿಕೊಳ್ಳಬೇಕು ಎಂಬ ಕಾರಣಕ್ಕೆ ಸಾಕಷ್ಟು ಡಯಟ್ ಪ್ಲ್ಯಾನ್​ಗಳನ್ನು ಮಾಡುತ್ತಾರೆ. ಕೆಲವೊಮ್ಮೆ ಇದೇ ಮುಳುವಾಗುವ ಸಾಧ್ಯತೆ ಇರುತ್ತದೆ. ಈಗ ಇದೇ ರೀತಿಯ ಘಟನೆ ನಡೆದಿದೆ.

ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭರತ್ ಕಲ್ಯಾಣ್ ಸದ್ಯ ತಮಿಳು ಕಿರುತೆರೆಯಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. 43 ವರ್ಷದ ಪ್ರಿಯದರ್ಶಿನಿ ಕೆಲವು ವಾರಗಳ ಹಿಂದೆ ಕೋಮಾಗೆ ಜಾರಿದ್ದರು. ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ. ಇಂದು ಪ್ರಿಯದರ್ಶನಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ

ದಪ್ಪ ಇದ್ದ ಕಾರಣ ಪ್ರಿಯದರ್ಶನಿ ಡಯಲ್ ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಕೆಲವು ತಿಂಗಳ ಹಿಂದೆ ಪ್ಯಾಲಿಯೋ ಆಹಾರ ಕ್ರಮವನ್ನು ಅನುಸರಿಸುತ್ತಿದ್ದರು. ಡಯಟ್ ನಲ್ಲಿ ಹಠಾತ್ ಬದಲಾವಣೆಯಿಂದ ಅವರ ಮಧುಮೇಹ ಒಮ್ಮೆಗೆ ಏರಿಕೆಗೆ ಕಾರಣವಾಗಿತ್ತು. ಇದೇ ಪ್ರಿಯದರ್ಶನಿ ಅವರ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.

ಮೂರು ತಿಂಗಳ ಹಿಂದೆ ಪ್ರಿಯದರ್ಶಿನಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಗಂಭೀರವಾಗಿತ್ತು ನಂತರ ಅವರು ಕೋಮಾಕ್ಕೆ ಹೋದರು. ವೈದ್ಯರು ಎಷ್ಟೇ ಪ್ರಯತ್ನ ಪಟ್ಟರೂ ಮತ್ತೆ ಪ್ರಜ್ಞೆಗೆ ಮರಳಲಿಲ್ಲ. ಅವರ ಪಾರ್ಥಿವ ಶರೀರವನ್ನು ಪ್ರಸ್ತುತ ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಕುಟುಂಬ ಮತ್ತು ಸ್ನೇಹಿತರ ಅಂತಿಮ ನಮನ ಸಲ್ಲಿಸಲು ಇರಿಸಲಾಗಿದೆ. ಪ್ರಿಯದರ್ಶಿನಿ ಅವರು ಭರತ್ ಕಲ್ಯಾಣ್  ದಂಪತಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಮತ್ತು ಮಗಳನ್ನು ಅಗಲಿದ್ದಾರೆ.

ನಟ ಭರತ್, ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ ಕಲ್ಯಾಣ್ ಕುಮಾರ್ ಅವರ ಪುತ್ರ. ಭರತ್ ಕಲ್ಯಾಣ್ ನಟನಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು. ಆದರೆ ಸಿನಿಮಾ ಅಷ್ಟಾಗಿ ಕೈ ಹಿಡಿಯದ ಕಾರಣ ಕಿರುತೆರೆಗೆ ಎಂಟ್ರಿ ಕೊಟ್ಟರು.  ಕಿರುತೆರೆಯಲ್ಲಿ ಭರತ್ ಕಲ್ಯಾಣ್ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT