ಲಾಲ್ ಸಲಾಮ್ ಚಿತ್ರದ ಪೋಸ್ಟರ್ - ನಟ ರಜನಿಕಾಂತ್ 
ಸಿನಿಮಾ ಸುದ್ದಿ

ಪುತ್ರಿ ಐಶ್ವರ್ಯಾ ನಿರ್ದೇಶನದ 'ಲಾಲ್ ಸಲಾಮ್' ಚಿತ್ರ; ವಿಶೇಷ ಪಾತ್ರದಲ್ಲಿ ನಟ ರಜಿನಿಕಾಂತ್

ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.

ಚೆನ್ನೈ: ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.

ಈ ಚಿತ್ರವನ್ನು ಪ್ರಸಿದ್ಧ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ನಟರಾದ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಕುರಿತು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದ್ದು, 'ಇಲ್ಲಿರುವ ಎಲ್ಲರಿಗೂ 'ಲಾಲ್ ಸಲಾಮ್'! ನಮ್ಮ ಮುಂದಿನ ಸಿನಿಮಾವನ್ನು ಘೋಷಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟ ಸೂಪರ್‌ಸ್ಟಾರ್ ರಜನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ!. ಚಿತ್ರವನ್ನು ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸಿದ್ದಾರೆ ಮತ್ತು ವಿಶಾಲ್ ವಿಷ್ಣು ಮತ್ತು ವಿಕ್ರಾಂತ್ ನಾಯಕರಾಗಿದ್ದಾರೆ. ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ' ಎಂದು ತಿಳಿಸಿದೆ.

ಈ ಹಿಂದೆ, ರಜನಿಕಾಂತ್ ಅವರು ಲೈಕಾ ಪ್ರೊಡಕ್ಷನ್ಸ್‌ನೊಂದಿಗೆ ಎರಡು ಚಿತ್ರಗಳ ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿತ್ತು. ಸೂಪರ್ ಸ್ಟಾರ್ ಸಹಿ ಮಾಡಿರುವ ಎರಡು ಚಿತ್ರಗಳಲ್ಲಿ 'ಲಾಲ್ ಸಲಾಮ್' ಕೂಡ ಒಂದು ಎನ್ನಲಾಗಿದೆ.

ಗಲಭೆಗಳು ಸಂಭವಿಸುತ್ತಿರುವ ಸ್ಥಳದಲ್ಲಿ ಕ್ರಿಕೆಟ್ ಹೆಲ್ಮೆಟ್ ಅನ್ನು ಮೇಲೆತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ಅನ್ನು ಸಹ ನಿರ್ಮಾಣ ಸಂಸ್ಥೆ ಬಿಡುಗಡೆ ಮಾಡಿದೆ.

ಕುತೂಹಲಕಾರಿ ವಿಚಾರವೆಂದರೆ, ಚಿತ್ರದಲ್ಲಿ ನಾಯಕರಾಗಿ ನಟಿಸಲು ಆಯ್ಕೆಯಾಗಿರುವ ನಟರಾದ ವಿಕ್ರಾಂತ್ ಮತ್ತು ವಿಷ್ಣು ವಿಶಾಲ್ ಉತ್ತಮ ಕ್ರಿಕೆಟಿಗರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT