ಲಾಲ್ ಸಲಾಮ್ ಚಿತ್ರದ ಪೋಸ್ಟರ್ - ನಟ ರಜನಿಕಾಂತ್ 
ಸಿನಿಮಾ ಸುದ್ದಿ

ಪುತ್ರಿ ಐಶ್ವರ್ಯಾ ನಿರ್ದೇಶನದ 'ಲಾಲ್ ಸಲಾಮ್' ಚಿತ್ರ; ವಿಶೇಷ ಪಾತ್ರದಲ್ಲಿ ನಟ ರಜಿನಿಕಾಂತ್

ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.

ಚೆನ್ನೈ: ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.

ಈ ಚಿತ್ರವನ್ನು ಪ್ರಸಿದ್ಧ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ನಟರಾದ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಕುರಿತು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದ್ದು, 'ಇಲ್ಲಿರುವ ಎಲ್ಲರಿಗೂ 'ಲಾಲ್ ಸಲಾಮ್'! ನಮ್ಮ ಮುಂದಿನ ಸಿನಿಮಾವನ್ನು ಘೋಷಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟ ಸೂಪರ್‌ಸ್ಟಾರ್ ರಜನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ!. ಚಿತ್ರವನ್ನು ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸಿದ್ದಾರೆ ಮತ್ತು ವಿಶಾಲ್ ವಿಷ್ಣು ಮತ್ತು ವಿಕ್ರಾಂತ್ ನಾಯಕರಾಗಿದ್ದಾರೆ. ಚಿತ್ರಕ್ಕೆ ಎ. ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ' ಎಂದು ತಿಳಿಸಿದೆ.

ಈ ಹಿಂದೆ, ರಜನಿಕಾಂತ್ ಅವರು ಲೈಕಾ ಪ್ರೊಡಕ್ಷನ್ಸ್‌ನೊಂದಿಗೆ ಎರಡು ಚಿತ್ರಗಳ ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಐಎಎನ್‌ಎಸ್ ವರದಿ ಮಾಡಿತ್ತು. ಸೂಪರ್ ಸ್ಟಾರ್ ಸಹಿ ಮಾಡಿರುವ ಎರಡು ಚಿತ್ರಗಳಲ್ಲಿ 'ಲಾಲ್ ಸಲಾಮ್' ಕೂಡ ಒಂದು ಎನ್ನಲಾಗಿದೆ.

ಗಲಭೆಗಳು ಸಂಭವಿಸುತ್ತಿರುವ ಸ್ಥಳದಲ್ಲಿ ಕ್ರಿಕೆಟ್ ಹೆಲ್ಮೆಟ್ ಅನ್ನು ಮೇಲೆತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ಅನ್ನು ಸಹ ನಿರ್ಮಾಣ ಸಂಸ್ಥೆ ಬಿಡುಗಡೆ ಮಾಡಿದೆ.

ಕುತೂಹಲಕಾರಿ ವಿಚಾರವೆಂದರೆ, ಚಿತ್ರದಲ್ಲಿ ನಾಯಕರಾಗಿ ನಟಿಸಲು ಆಯ್ಕೆಯಾಗಿರುವ ನಟರಾದ ವಿಕ್ರಾಂತ್ ಮತ್ತು ವಿಷ್ಣು ವಿಶಾಲ್ ಉತ್ತಮ ಕ್ರಿಕೆಟಿಗರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT