ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

'ಕಾಂತಾರ' ಸೀಕ್ವೆಲ್, ಬಾಲಿವುಡ್ ನಲ್ಲಿ ಆಫರ್ ಕುರಿತು ರಿಷಬ್ ಶೆಟ್ಟಿ ಹೇಳಿದ್ದು ಹೀಗೆ...

ಇತ್ತೀಚಿಗೆ ಬಿಡುಗಡೆಯಾದ ಆಕ್ಷನ್ ಥ್ರಿಲ್ಲರ್ 'ಕಾಂತಾರ' ಬಾಕ್ಸ್ ಆಫೀಸ್ ನಲ್ಲಿ 300 ಕೋಟಿ ರೂ. ದೋಚುವುದರೊಂದಿಗೆ ಭರ್ಜರಿ ಪ್ರದರ್ಶನ ಯಶಸ್ಸು ಗಳಿಸಿದ ನಂತರ ತನಗೆ ಬಾಲಿವುಡ್  ಚಿತ್ರ ನಿರ್ಮಾಪಕರಿಂದ ಆಫರ್ ಬಂದಿದ್ದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು: ಇತ್ತೀಚಿಗೆ ಬಿಡುಗಡೆಯಾದ ಆಕ್ಷನ್ ಥ್ರಿಲ್ಲರ್ 'ಕಾಂತಾರ' ಬಾಕ್ಸ್ ಆಫೀಸ್ ನಲ್ಲಿ 300 ಕೋಟಿ ರೂ. ದೋಚುವುದರೊಂದಿಗೆ ಭರ್ಜರಿ ಪ್ರದರ್ಶನ ಯಶಸ್ಸು ಗಳಿಸಿದ ನಂತರ ತನಗೆ ಬಾಲಿವುಡ್  ಚಿತ್ರ ನಿರ್ಮಾಪಕರಿಂದ ಆಫರ್ ಬಂದಿದ್ದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ಬಾಲಿವುಡ್ ಚಿತ್ರ ನಿರ್ಮಾಪಕರಿಂದ ಆಫರ್ ಬಂದದ್ದು ನಿಜ. ಆದರೆ, ಪ್ರಸ್ತುತ ಕನ್ನಡದಲ್ಲಿಯೇ ಚಿತ್ರ ಮಾಡಲು ಬಯಸುತ್ತೇನೆ. ಅಮಿತಾಬ್ ಬಚ್ಚನ್ ಅವರನ್ನು ಆರಾದಿಸುತ್ತೇನೆ, ಯುವ ಪೀಳಿಗೆಯ ನೆಚ್ಚಿನ ನಟರಾದ ಶಾಹಿದ್ ಕಪೂರ್ ಅಥವಾ ಸಲ್ಮಾನ್ ಖಾನ್ ನಂತಹ ಅನೇಕ ನಟರನ್ನು ಇಷ್ಟಪಡುವುದಾಗಿ ಎಎನ್ ಐ ಸುದ್ದಿಸಂಸ್ಥೆಗೆ ಅವರು ಹೇಳಿದರು.

ಸೆಪ್ಟೆಂಬರ್ 30 ರಂದು ಬಿಡುಗಡೆಯಾದ ಕಾಂತಾರ ಚಿತ್ರಕಥೆ, ಅದ್ಬುತ ದೃಶ್ಯಗಳಿಗೆ ಅಭಿಮಾನಿಗಳು ಪಿಧಾ ಆಗಿದ್ದು, ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಇತ್ತೀಚಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸೂಪರ್ ಸ್ಟಾರ್ ರಜನಿಕಾಂತ್ ಕೂಡಾ ರಿಷಬ್ ಶೆಟ್ಟಿ ಅವರನ್ನು ಹೊಗಳಿದ್ದರು.

ಭಾರತೀಯ ಚಿತ್ರಗಳ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ಚಿತ್ರ ಬಿಡುಗಡೆಯಾದ ಮೂರನೇ ವಾರದ ಬಳಿಕವೂ ಹಿಂದಿ ಮಾರುಕಟ್ಟೆಯಲ್ಲಿ ಕಾಂತಾರ ರೂ. 50 ಕೋಟಿ ಬಾಚಿದ್ದು, ಕೆಜಿಎಫ್ 1 ಕಲೆಕ್ಷನ್ ಹಿಂದಿಕ್ಕಿದೆ. ಕಾಂತಾರ-2 ಕುರಿತು ಮಾತನಾಡಿದ ರಿಷಬ್ ಶೆಟ್ಟಿ, ಅದರ ಬಗ್ಗೆ ಇಲ್ಲಿಯವರೆಗೂ ಏನನ್ನೂ ಯೋಚಿಸಿಲ್ಲ. ಅಂತಹ ಸಂದರ್ಭ ಬಂದಾಗ ಅದನ್ನು ಘೋಷಿಸುತ್ತೇವೆ ಎಂದು ರಿಷಬ್ ಶೆಟ್ಟಿ ತಿಳಿಸಿದರು. 

ಕಾಂತಾರ ಸಿನಿಮಾಕ್ಕೆ ಭಾರೀ ಪ್ರಶಂಸೆ ವ್ಯಕ್ತವಾದ ನಂತರ ಅದನ್ನು ಅಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT