ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

'ಕಾಂತಾರ' ಸೀಕ್ವೆಲ್, ಬಾಲಿವುಡ್ ನಲ್ಲಿ ಆಫರ್ ಕುರಿತು ರಿಷಬ್ ಶೆಟ್ಟಿ ಹೇಳಿದ್ದು ಹೀಗೆ...

ಇತ್ತೀಚಿಗೆ ಬಿಡುಗಡೆಯಾದ ಆಕ್ಷನ್ ಥ್ರಿಲ್ಲರ್ 'ಕಾಂತಾರ' ಬಾಕ್ಸ್ ಆಫೀಸ್ ನಲ್ಲಿ 300 ಕೋಟಿ ರೂ. ದೋಚುವುದರೊಂದಿಗೆ ಭರ್ಜರಿ ಪ್ರದರ್ಶನ ಯಶಸ್ಸು ಗಳಿಸಿದ ನಂತರ ತನಗೆ ಬಾಲಿವುಡ್  ಚಿತ್ರ ನಿರ್ಮಾಪಕರಿಂದ ಆಫರ್ ಬಂದಿದ್ದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ಬೆಂಗಳೂರು: ಇತ್ತೀಚಿಗೆ ಬಿಡುಗಡೆಯಾದ ಆಕ್ಷನ್ ಥ್ರಿಲ್ಲರ್ 'ಕಾಂತಾರ' ಬಾಕ್ಸ್ ಆಫೀಸ್ ನಲ್ಲಿ 300 ಕೋಟಿ ರೂ. ದೋಚುವುದರೊಂದಿಗೆ ಭರ್ಜರಿ ಪ್ರದರ್ಶನ ಯಶಸ್ಸು ಗಳಿಸಿದ ನಂತರ ತನಗೆ ಬಾಲಿವುಡ್  ಚಿತ್ರ ನಿರ್ಮಾಪಕರಿಂದ ಆಫರ್ ಬಂದಿದ್ದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

ಬಾಲಿವುಡ್ ಚಿತ್ರ ನಿರ್ಮಾಪಕರಿಂದ ಆಫರ್ ಬಂದದ್ದು ನಿಜ. ಆದರೆ, ಪ್ರಸ್ತುತ ಕನ್ನಡದಲ್ಲಿಯೇ ಚಿತ್ರ ಮಾಡಲು ಬಯಸುತ್ತೇನೆ. ಅಮಿತಾಬ್ ಬಚ್ಚನ್ ಅವರನ್ನು ಆರಾದಿಸುತ್ತೇನೆ, ಯುವ ಪೀಳಿಗೆಯ ನೆಚ್ಚಿನ ನಟರಾದ ಶಾಹಿದ್ ಕಪೂರ್ ಅಥವಾ ಸಲ್ಮಾನ್ ಖಾನ್ ನಂತಹ ಅನೇಕ ನಟರನ್ನು ಇಷ್ಟಪಡುವುದಾಗಿ ಎಎನ್ ಐ ಸುದ್ದಿಸಂಸ್ಥೆಗೆ ಅವರು ಹೇಳಿದರು.

ಸೆಪ್ಟೆಂಬರ್ 30 ರಂದು ಬಿಡುಗಡೆಯಾದ ಕಾಂತಾರ ಚಿತ್ರಕಥೆ, ಅದ್ಬುತ ದೃಶ್ಯಗಳಿಗೆ ಅಭಿಮಾನಿಗಳು ಪಿಧಾ ಆಗಿದ್ದು, ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಇತ್ತೀಚಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಸೂಪರ್ ಸ್ಟಾರ್ ರಜನಿಕಾಂತ್ ಕೂಡಾ ರಿಷಬ್ ಶೆಟ್ಟಿ ಅವರನ್ನು ಹೊಗಳಿದ್ದರು.

ಭಾರತೀಯ ಚಿತ್ರಗಳ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ಚಿತ್ರ ಬಿಡುಗಡೆಯಾದ ಮೂರನೇ ವಾರದ ಬಳಿಕವೂ ಹಿಂದಿ ಮಾರುಕಟ್ಟೆಯಲ್ಲಿ ಕಾಂತಾರ ರೂ. 50 ಕೋಟಿ ಬಾಚಿದ್ದು, ಕೆಜಿಎಫ್ 1 ಕಲೆಕ್ಷನ್ ಹಿಂದಿಕ್ಕಿದೆ. ಕಾಂತಾರ-2 ಕುರಿತು ಮಾತನಾಡಿದ ರಿಷಬ್ ಶೆಟ್ಟಿ, ಅದರ ಬಗ್ಗೆ ಇಲ್ಲಿಯವರೆಗೂ ಏನನ್ನೂ ಯೋಚಿಸಿಲ್ಲ. ಅಂತಹ ಸಂದರ್ಭ ಬಂದಾಗ ಅದನ್ನು ಘೋಷಿಸುತ್ತೇವೆ ಎಂದು ರಿಷಬ್ ಶೆಟ್ಟಿ ತಿಳಿಸಿದರು. 

ಕಾಂತಾರ ಸಿನಿಮಾಕ್ಕೆ ಭಾರೀ ಪ್ರಶಂಸೆ ವ್ಯಕ್ತವಾದ ನಂತರ ಅದನ್ನು ಅಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT