ನಟ ವಸಿಷ್ಠ ಸಿಂಹ 
ಸಿನಿಮಾ ಸುದ್ದಿ

ಬೆಲ್ ಬಾಟಂ ಚಿತ್ರದ ಕಥೆ ಬರೆದಿದ್ದ ಟಿ.ಕೆ.ದಯಾನಂದ ನಿರ್ದೇಶನದ 2ನೇ ಚಿತ್ರ 80ರ ದಶಕದ ನೈಜ ಮಾಫಿಯಾ ಕಥೆ

ದಯಾನಂದ್ ಈಗ ತಮ್ಮ ಎರಡನೇ ಚಿತ್ರದ ನಿರ್ದೇಶನದತ್ತ ಮರಳಲಿದ್ದಾರೆ. ನಿರ್ದೇಶಕರ ಮುಂದಿನ ಸಿನಿಮಾದಲ್ಲಿ ಹೆಚ್ಚಿನ ಪ್ರಮಾಣದ ಹಿಂಸಾಚಾರ ಇರುತ್ತದೆ ಮತ್ತು 1988 ರಲ್ಲಿ ಕೇರಳ ಮತ್ತು ಕರ್ನಾಟಕದ ಗಡಿಯ ನಡುವಿನ ಪಟ್ಟಣದಲ್ಲಿ ನಡೆದ ನೈಜ ಘಟನೆಯ ಮೇಲೆ ಚಿತ್ರ ಬೆಳಕು ಚೆಲ್ಲಲಿದೆ.

ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಬೆಂಕಿಪಟ್ಣ ಸಿನಿಮಾದ ನಿರ್ದೇಶಕ ಕೆ. ದಯಾನಂದ್ ಅವರು ಬೆಲ್ ಬಾಟಮ್ ಮತ್ತು ಆಕ್ಟ್ 1978 ಸಿನಿಮಾಗಳ ಕಥೆಗಾಗಿ ಖ್ಯಾತಿಯನ್ನು ಪಡೆದರು. ಇದೀಗ ಸತೀಶ್ ನೀನಾಸಂ ಅಭಿನಯದ ಇನ್ನೂ ಬಿಡುಗಡೆಯಾಗದ 'ಅಶೋಕ ಬ್ಲೇಡ್‌' ಮತ್ತು ಅಭಿಷೇಕ್ ಅಂಬರೀಶ್ ಅಭಿನಯದ ಹಾಗೂ ಮಹೇಶ್ ಕುಮಾರ್ ನಿರ್ದೇಶದನ ಇನ್ನೂ ಹೆಸರಿಡದ ಸಿನಿಮಾಗೆ ಚಿತ್ರಕಥೆಯನ್ನು ಸಹ ಬರೆಯುತ್ತಿದ್ದಾರೆ. ದಯಾನಂದ್ ಅವರು ಬೆಲ್ ಬಾಟಮ್ ಮತ್ತು ವೆಬ್ ಸರಣಿಗಳಿಗೆ ಕಥೆ ಬರೆದಿದ್ದಾರೆ.

ದಯಾನಂದ್ ಈಗ ತಮ್ಮ ಎರಡನೇ ಚಿತ್ರದ ನಿರ್ದೇಶನದತ್ತ ಮರಳಲಿದ್ದಾರೆ. ನಿರ್ದೇಶಕರ ಮುಂದಿನ ಸಿನಿಮಾದಲ್ಲಿ ಹೆಚ್ಚಿನ ಪ್ರಮಾಣದ ಹಿಂಸಾಚಾರ ಇರುತ್ತದೆ ಮತ್ತು 1988 ರಲ್ಲಿ ಕೇರಳ ಮತ್ತು ಕರ್ನಾಟಕದ ಗಡಿಯ ನಡುವಿನ ಪಟ್ಟಣದಲ್ಲಿ ನಡೆದ ನೈಜ ಘಟನೆಯ ಮೇಲೆ ಚಿತ್ರ ಬೆಳಕು ಚೆಲ್ಲಲಿದೆ.

'ಇದೊಂದು ನಿಗೂಢ ಮಾಫಿಯಾ ಕಥೆ. ಈ ಬಗ್ಗೆ ಬೆಳ್ಳಿತೆರೆಯಲ್ಲಿ ಇದುವರೆಗೂ ಹೇಳಿಲ್ಲ' ಎಂದು ಸ್ಕ್ರಿಪ್ಟ್ ಪೂರ್ಣಗೊಳಿಸಿರುವ ದಯಾನಂದ್ ಹೇಳುತ್ತಾರೆ ಮತ್ತು ಚಿತ್ರಕ್ಕೆ ತಾರಾಗಣವನ್ನು ಅಂತಿಮಗೊಳಿಸುತ್ತಿದ್ದಾರೆ.

'ಈಗಾಗಲೇ ವಸಿಷ್ಠ ಸಿಂಹ ಅವರ ಹೆಸರು ಅಂತಿಮಗೊಂಡಿದ್ದು, ಶೀಘ್ರದಲ್ಲೇ ನಾನು ಧನಂಜಯ್ ಅವರನ್ನು ಸಂಪರ್ಕಿಸಲು ಯೋಜಿಸುತ್ತಿದ್ದೇನೆ. ಉಳಿದ ಪಾತ್ರವರ್ಗವನ್ನು ಅಂತಿಮಗೊಳಿಸಿದ ನಂತರ ಯೋಜನೆಯ ತಂತ್ರಜ್ಞರ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT