ಅವತಾರ್ 
ಸಿನಿಮಾ ಸುದ್ದಿ

ಕನ್ನಡದಲ್ಲೂ ಬರುತ್ತಿದೆ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ: ಟ್ರೇಲರ್ ಬಿಡುಗಡೆ ಮಾಡಿ ನಮಸ್ತೆ ಇಂಡಿಯಾ ಎಂದ ಹಾಲಿವುಡ್ ನಿರ್ಮಾಪಕ

ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.

ಬೆಂಗಳೂರು: ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.

ಹೌದು, ಕನ್ನಡಿಗರ ಒತ್ತಾಯಕ್ಕೆ ಮಣಿದಿರುವ ಚಿತ್ರದ ಭಾರತದಲ್ಲಿನ ಹಂಚಿಕೆದಾರರಾದ ‘20th ಸೆಂಚುರಿ ಸ್ಟುಡಿಯೋಸ್‌ ಇಂಡಿಯಾ’ ಕಂಪನಿ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಇದರಂತೆ ಪೂರ್ವಭಾವಿಯಾಗಿ ಚಿತ್ರದ ಕನ್ನಡ ಟ್ರೇಲರ್‌ನ್ನು ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದೆ.

ಕಳೆದ ವಾರ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಅದರಲ್ಲಿ ಚಿತ್ರ ಡಿಸೆಂಬರ್ 16ಕ್ಕೆ ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಹಾಗೂ ಮಲೆಯಾಳಂನಲ್ಲಿ ಮಾತ್ರ ಬಿಡುಗಡೆಯಾಗುತ್ತದೆ ಎಂದು ತಿಳಿಸಲಾಗಿತ್ತು.

ಇದರ ಬೆನ್ನಲ್ಲೇ ಕನ್ನಡಿಗರು ಕೆಂಡ ಕಾರಿದ್ದರು. ಕರ್ನಾಟಕದಲ್ಲಿ ಅವತಾರ್‌ ಅನ್ನು ಕನ್ನಡದಲ್ಲೇ ಬಿಡುಗಡೆ ಮಾಡಬೇಕು, ಇಂತಹ ಬಹು ನಿರೀಕ್ಷಿತ ಸಿನಿಮಾವನ್ನು ಕನ್ನಡಿಗರು ಕನ್ನಡದಲ್ಲಿ ಏಕೆ ನೋಡಬಾರದು? ಮಲೆಯಾಳಂನಲ್ಲಿ ಅವಕಾಶವಿದ್ದು, ಕನ್ನಡಕ್ಕೆ ಏಕೆ ಅವಕಾಶವಿಲ್ಲ ಎಂದು ಪ್ರಶ್ನಿಸಿದ್ದರು. ಇದೀಗ ‘20th ಸೆಂಚುರಿ ಸ್ಟುಡಿಯೋಸ್‌ ಇಂಡಿಯಾ’ ಕಂಪನಿ ಕನ್ನಡದಲ್ಲಿ ಬಿಡುಗಡೆ ಮಾಡಲು ನಿರ್ಧರಿಸುವ ಹಿನ್ನೆಲೆಯಲ್ಲಿ ಅನೇಕ ಟ್ವೀಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಹಾಲಿವುಡ್ ನಿರ್ಮಾಪಕ ಜಾನ್ ಲ್ಯಾಂಡೌ ಕೂಡ ಟ್ವೀಟ್ ಮಾಡಿದ್ದು, ನಮಸ್ತೆ ಇಂಡಿಯಾ, ನಾನು ಭಾರತದ ಬಹುಭಾಷಾ ಸಂಸ್ಕೃತಿಯನ್ನು ಗೌರವಿಸುತ್ತೇನೆ, ಆರು ಭಾಷೆಗಳಲ್ಲಿ ಅವತಾರ್ 2 ಬಿಡುಗಡೆಯಾಗುತ್ತಿದೆ. ಡಿಸೆಂಬರ್ 16ರಂದು ಪ್ಯಾಂಡೋರಗೆ ಬನ್ನಿ. ಈಗ ಹೊಚ್ಚಹೊಸ ಟ್ರೇಲರ್ ಅನ್ನು ನೋಡಿ ಮತ್ತು ಆನಂದಿಸಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT