ಧನಂಜಯ್ 
ಸಿನಿಮಾ ಸುದ್ದಿ

'ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ'

ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.

ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.

ಅದು ಕನಕದಾಸರ ರಚನೆಯಾದರೂ, ಧನಂಜಯ್ ತಮ್ಮ ವೈರಿಗಳಿಗೆ ಈ ಮೂಲಕ ಟಾಂಗ್ ಕೊಟ್ಟಿದ್ದಾರೆ. ಇತ್ತೀಚಿಗೆ ಡಾಲಿ ವೃತ್ತಿ ಜೀವನದಲ್ಲಿ ನಡೆದ ಘಟನೆಯನ್ನು ನೆನಪಿಸುತ್ತಲೇ, ತಮ್ಮ ಬಗ್ಗೆ ಸಲ್ಲದ ಆರೋಪಗಳನ್ನು ಮಾಡುವವರಿಗೆ ಈ ಮೂಲಕ ಎಚ್ಚರಿಸಿದ್ದಾರೆ.

ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆಗೆ ಅಪಮಾನ ಮಾಡಿದ್ದಾರೆ ಎಂದು ವಿವಾದ ಸೃಷ್ಟಿ ಮಾಡಲಾಯಿತು. ಕರಗದ ವಿಚಾರದಲ್ಲೂ ಎಳೆತರಲಾಯಿತು. ಬಡವರ ಮಕ್ಳು ಬೆಳೆಯಬೇಕು ಎನ್ನುವ ಅವರ ಮಾತನ್ನು ಟ್ರೋಲ್ ಮಾಡಲಾಯಿತು. ತಮ್ಮ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಎಲ್ಲರಿಗೂ ಈ ಕನಕದಾಸರ ರಚನೆಯ ಮೂಲಕ ಉತ್ತರಿಸಿದ್ದಾರೆ ಧನಂಜಯ್.

ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ, ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ. ಜನರೊಳಗೆ ಮಾನಭಂಗ ಮಾಡಿದವರಿಗೆ ಜೇನು ತುಪ್ಪು, ಸಕ್ಕರೆ ಊಟ ಆಗಲಿ ಅವರಿಗೆ. ಹಾನಿ ಬಾರದಂತಹ ಲೋಕ ಆಗಲಿ ಅವರಿಗೆ. ಮಹಾನುಭಾವ ಮುಕ್ತಿಯ ಕೊಡುವ ನೆಲೆಯಾದಿಕೇಶವ’ ಎಂದು ದಾಸರಪದವನ್ನು ಹಾಕುವ ಮೂಲಕ ತಮಗೆಲ್ಲ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಏನು ಒಲ್ಲೆ ಹರಿಯೇ ನಿನ್ನ ಸ್ತುತಿಸಿ ಕೇಳುವುದು ,ಜ್ಞಾನಭಕ್ತಿ ಕೊಡು ಯಮಗೆ ಇದೊಂದೇ ದೊಡ್ಡದು, ಒಂದು ನೆವದಿಂದ ಎನ್ನ ಕಾಡಿದವರಿಗೆ, ಹೊನ್ನು ಹೆಣ್ಣು ಗಂಡು ಮಕ್ಕಳು ಆಗಲಿ ಅವರಿಗೆ, ಕಂದಿ ಕುಂದಿ ಯನ್ನ  ಬಾಧೆ ಪಡಿಸಿದವರಿಗೆ ಕನ್ಯದಾನದ  ಫಲ ಬಂದು ತಟ್ಟಲಿ ಅವರಿಗೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT