ಸೂಪರ್ ಸ್ಟಾರ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಉಪೇಂದ್ರ ಸಹೋದರನ ಪುತ್ರ ನಟಿಸಿರುವ 'ಸೂಪರ್ ಸ್ಟಾರ್' ಚಿತ್ರದ ನಿರ್ದೇಶಕನ ಮೇಲೆ ಎಫ್ಐಆರ್

ನಟ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ನಟನೆಯ ಸೂಪರ್ ಸ್ಟಾರ್ ಚಿತ್ರದ ನಿರ್ದೇಶಕನಿಗೆ ಕಾನೂನು ಸಂಕಷ್ಟ ಎದುರಾಗಿದೆ.

ಬೆಂಗಳೂರು: ನಟ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ನಟನೆಯ ಸೂಪರ್ ಸ್ಟಾರ್ ಚಿತ್ರದ ನಿರ್ದೇಶಕನಿಗೆ ಕಾನೂನು ಸಂಕಷ್ಟ ಎದುರಾಗಿದೆ. ವಂಚನೆ, ಪ್ರಾಣ ಬೆದರಿಕೆಯಂತಹ ಗಂಭೀರ ಪ್ರಕರಣಗಳು ಅವರ ಮೇಲೆ ದಾಖಲಾಗಿದ್ದು, ಈ ಚಿತ್ರದ ನಿರ್ಮಾಪಕರು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೋಟ್ಯಾಂತರ ರೂಪಾಯಿ ವಂಚನೆ ಮತ್ತು ತಮಗೆ ನಿರ್ದೇಶಕರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಿನಿಮಾ ಚೆನ್ನಾಗಿ ಗಳಿಕೆ ಮಾಡಲಿದೆ ಎಂದು ನಿರ್ದೇಶಕ ವೆಂಕಟೇಶ ಬಾಬು‌ 1.10 ಕೋಟಿ ರೂಪಾಯಿ ಹಣ ಪಡೆದಿದ್ದಾರೆ.

ಬಳಿಕ ಕಲಾವಿದರಿಗೂ ಹಣ ನೀಡದೆ ಸ್ವಂತಕ್ಕೆ ಬಳಸಿಕೊಂಡು ಸಿನಿಮಾ ಪ್ರಾರಂಭಿಸಿದ್ದಾರೆ. ಇದಲ್ಲದೆ, ತಮಗೆ ಗೊತ್ತಿಲ್ಲದೆ ಸಿನಿಮಾ ಮಾಲೀಕತ್ವವನ್ನು ಬೇರೆಯವರಿಗೆ ಮಾರಿದ್ದಾರೆ ಎಂದು ದೂರಿನಲ್ಲಿ ಮೈಲಾರಪ್ಪ ಉಲ್ಲೇಖಿಸಿದ್ದಾರೆ.ಈ ಬಗ್ಗೆ ನಿರ್ಮಾಪಕ ಮೈಲಾರಪ್ಪ ಅವರ ದೂರಿನಂಂತೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT