ನಟ ಕೃಷ್ಣ 
ಸಿನಿಮಾ ಸುದ್ದಿ

ಟಾಲಿವುಡ್ ಸೂಪರ್ ಸ್ಟಾರ್ ನಟ ಕೃಷ್ಣ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್'ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಹೈದರಾಬಾದ್: ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಬಾಬು ಅವರ ತಂದೆ ಹಾಗೂ ಟಾಲಿವುಡ್'ನ ಸೂಪರ್ ಸ್ಟಾರ್ ನಟ ಕೃಷ್ಣ ಘಟ್ಟಮನೇನಿ (80) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ನಟ ಕೃಷ್ಣ ಅವರನ್ನು ನಿನ್ನೆ ಹೈದರಾಬಾದ್'ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 4 ಗಂಟೆಗೆ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಕೃಷ್ಣ ಅವರ ಮೂಲ ಹೆಸರು ಘಟ್ಟಮನೇನಿ ಶಿವ ರಾಮ ಕೃಷ್ಣ ಮೂರ್ತಿ. ಇವರು ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದಾರೆ. ಆ ಕಾಲದ ಅಗ್ರಗಣ್ಯ ನಟರಲ್ಲಿ ಇವರೂ ಒಬ್ಬರು. ಕೃಷ್ಣ ಅವರು ನಟ ಮಾತ್ರವಲ್ಲದೆ ಒಬ್ಬ ಯಶಸ್ವಿ ನಿರ್ದೇಶಕ ಹಾಗೂ ನಿರ್ಮಾಪಕ ಕೂಡ ಆಗಿದ್ದರು. ಅವರ ಚಿತ್ರರಂಗದ ಸೇವೆಯನ್ನು ಗುರುತಿಸಿ ಅವರಿಗೆ 2009ರಲ್ಲಿ ಪದ್ಮಭೂಷಣ ಪ್ರಶಸ್ತಿ ಕೂಡ ನೀಡಿ ಗೌರವಿಸಲಾಗಿತ್ತು.

ನಟ ಕೃಷ್ಣ ತೆಲುಗು ಸ್ಟಾರ್‌ ನಟ ಮಹೇಶ್‌ ಬಾಬು ಅವರ ತಂದೆ ಹಾಗೂ ಟಿಡಿಪಿ ನಾಯಕ ಜಯ್‌ ಗಲ್ಲಾ ಅವರ ಮಾವ ಕೂಡ ಆಗಿದ್ದಾರೆ. 1980ರ ದಶಕದಲ್ಲಿ ಅವರು ಕಾಂಗ್ರೆಸ್‌ ಪಕ್ಷ ಸೇರಿ ಸಂಸದರು ಆಗಿದ್ದರು. ಆದರೆ, ಕೃಷ್ಣ ಅವರು ತಮಿಳುನಾಡಿನಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಹತ್ಯೆಯಾದ ಬಳಿಕ ರಾಜಕೀಯವನ್ನು ತೊರೆದಿದ್ದರು.

1965ರಲ್ಲಿ ಅವರು ನಟನೆಯ ಜರ್ನಿ ಆರಂಭಿಸಿದ್ದ ಕೃಷ್ಣ ಅವರು, ಪೌರಾಣಿಕ, ಐತಿಹಾಸಿಕ ಸೇರಿದಂತೆ ಹಲವು ಬಗೆಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಕೃಷ್ಣ ಅವರ ಅಂದಾಜು 25 ಸಿನಿಮಾಗಳಲ್ಲಿ ಮಹೇಶ್​ ಬಾಬು ಬಾಲ ನಟನಾಗಿ ಅಭಿನಯಿಸಿದ್ದರು.

ಸೆಪ್ಟೆಂಬರ್​ 28ರಂದು ಕೃಷ್ಣ ಅವರ ಪತ್ನಿ ಇಂದಿರಾ ದೇವಿ ನಿಧನ ಹೊಂದಿದರು. ಆ ಬಳಿಕ ಕೃಷ್ಣ ಅವರು ಖಿನ್ನತೆಗೆ ಒಳಗಾದರು ಎನ್ನಲಾಗಿದೆ. ಈ ವರ್ಷ ಆರಂಭದಲ್ಲಿ ಕೃಷ್ಣ ಅವರ ಹಿರಿಯ ಪುತ್ರ ರಮೇಶ್​ ಬಾಬು ಕೂಡ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT