ಮುರಳಿ, ಕೋಮಲ್ 
ಸಿನಿಮಾ ಸುದ್ದಿ

'ನಮೋ ಭೂತಾತ್ಮ 2' ಮತ್ತೆ ಜೊತೆಯಾದ ಕೋಮಲ್-ಮುರಳಿ

ಕೋಮಲ್ ಅಭಿನಯದ ನಮೋ ಭೂತಾತ್ಮ (2014) ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡಿದ್ದ ನೃತ್ಯ ಸಂಯೋಜಕ ಮುರಳಿ ಅವರು ಇದೀಗ ಮತ್ತೆ ನಮೋ ಭೂತಾತ್ಮ 2 ಮೂಲಕ ಕೋಮಲ್ ಜೊತೆಗೆ ಕೈಜೋಡಿಸಿದ್ದಾರೆ.

ಕೋಮಲ್ ಅಭಿನಯದ ನಮೋ ಭೂತಾತ್ಮ (2014) ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡಿದ್ದ ನೃತ್ಯ ಸಂಯೋಜಕ ಮುರಳಿ ಅವರು ಇದೀಗ ಮತ್ತೆ ನಮೋ ಭೂತಾತ್ಮ 2 ಮೂಲಕ ಕೋಮಲ್ ಜೊತೆಗೆ ಕೈಜೋಡಿಸಿದ್ದಾರೆ.

ಚಿತ್ರವು ಹಾರರ್ ಕಾಮಿಡಿ ಚಿತ್ರವಾಗಿದ್ದು, ನಮೋ ಭೂತಾತ್ಮ ಚಿತ್ರದ ಮುಂದುವರೆದ ಭಾಗ ಇದಾಗಿದೆ ಎಂದು ತಿಳಿದುಬಂದಿದೆ.

650 ಕ್ಕೂ ಹೆಚ್ಚು ಹಾಡುಗಳಿಗೆ ಕೆಲಸ ಮಾಡಿರುವ ಮುರಳಿ ಇದು ಮೂರನೇ ನಿರ್ದೇಶನದ ಚಿತ್ರವಾಗಿದೆ. ಚಿತ್ರದಲ್ಲಿ ಗೋವಿಂದಾಯ ನಮಃ ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ಹಾಸ್ಯನಟ, ನಟ ಕೋಮಲ್ ಅವರೊಂದಿಗೆ ಲೇಖಾ ಚಂದ್ರ ಅವರು ಜೋಡಿಯಾಗಲಿದ್ದಾರೆ. ಮುಂಬರುವ ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಚಿತ್ರದಲ್ಲಿ ಲೇಖಾ ಕಾಣಿಸಿಕೊಳ್ಳಲಿದ್ದಾರೆ.

ಲೇಖಾ ಮತ್ತು ಕೋಮಲ್ ಅವರಲ್ಲದೆ, ನಮೋ ಭೂತಾತ್ಮ 2 ರ ಪಾತ್ರವರ್ಗದಲ್ಲಿ ಮಿಮಿಕ್ರಿ ಗೋಪಿ, ಮಹಂತೇಶ್, ಗೋವಿಂದೇಗೌಡ, ರುದ್ರೇಶ್ (ಗೌಳಿ) ಮತ್ತು ಮೋನಿಕಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ನೃತ್ಯ ನಿರ್ದೇಶಕ ವರುಣ್ ರಾಜ್ ಕೂಡ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ಅರುಣ್ ಆಂಡ್ರ್ಯೂಸ್ ಸಂಗೀತ ಸಂಯೋಜಿಸಿದ್ದರೆ, ಹಾಲೇಶ್ ಎಸ್ (ಓ ಮೈ ಲವ್) ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.

ಚಿತ್ರದ ಸಂಪೂರ್ಣ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದ್ದು, ಡಿಸೆಂಬರ್ 2 ರಂದು ನಮೋ ಭೂತಾತ್ಮ 2 ಚಿತ್ರೀಕರಣವನ್ನು ಆರಂಭಿಸಲು ನಿರ್ದೇಶಕ ಮುರಳಿ ಚಿಂತನೆ ನಡೆಸಿದ್ದಾರೆ. ಅದಕ್ಕೂ ಮೊದಲು ನವೆಂಬರ್ 27 ರಂದು ಚಿತ್ರದ ಫೋಟೋಶೂಟ್ ಮಾಡಲು ನಿರ್ದೇಶಕರು ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT