ಮುರಳಿ, ಕೋಮಲ್ 
ಸಿನಿಮಾ ಸುದ್ದಿ

'ನಮೋ ಭೂತಾತ್ಮ 2' ಮತ್ತೆ ಜೊತೆಯಾದ ಕೋಮಲ್-ಮುರಳಿ

ಕೋಮಲ್ ಅಭಿನಯದ ನಮೋ ಭೂತಾತ್ಮ (2014) ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡಿದ್ದ ನೃತ್ಯ ಸಂಯೋಜಕ ಮುರಳಿ ಅವರು ಇದೀಗ ಮತ್ತೆ ನಮೋ ಭೂತಾತ್ಮ 2 ಮೂಲಕ ಕೋಮಲ್ ಜೊತೆಗೆ ಕೈಜೋಡಿಸಿದ್ದಾರೆ.

ಕೋಮಲ್ ಅಭಿನಯದ ನಮೋ ಭೂತಾತ್ಮ (2014) ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ ವುಡ್'ಗೆ ಪಾದಾರ್ಪಣೆ ಮಾಡಿದ್ದ ನೃತ್ಯ ಸಂಯೋಜಕ ಮುರಳಿ ಅವರು ಇದೀಗ ಮತ್ತೆ ನಮೋ ಭೂತಾತ್ಮ 2 ಮೂಲಕ ಕೋಮಲ್ ಜೊತೆಗೆ ಕೈಜೋಡಿಸಿದ್ದಾರೆ.

ಚಿತ್ರವು ಹಾರರ್ ಕಾಮಿಡಿ ಚಿತ್ರವಾಗಿದ್ದು, ನಮೋ ಭೂತಾತ್ಮ ಚಿತ್ರದ ಮುಂದುವರೆದ ಭಾಗ ಇದಾಗಿದೆ ಎಂದು ತಿಳಿದುಬಂದಿದೆ.

650 ಕ್ಕೂ ಹೆಚ್ಚು ಹಾಡುಗಳಿಗೆ ಕೆಲಸ ಮಾಡಿರುವ ಮುರಳಿ ಇದು ಮೂರನೇ ನಿರ್ದೇಶನದ ಚಿತ್ರವಾಗಿದೆ. ಚಿತ್ರದಲ್ಲಿ ಗೋವಿಂದಾಯ ನಮಃ ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ಹಾಸ್ಯನಟ, ನಟ ಕೋಮಲ್ ಅವರೊಂದಿಗೆ ಲೇಖಾ ಚಂದ್ರ ಅವರು ಜೋಡಿಯಾಗಲಿದ್ದಾರೆ. ಮುಂಬರುವ ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಚಿತ್ರದಲ್ಲಿ ಲೇಖಾ ಕಾಣಿಸಿಕೊಳ್ಳಲಿದ್ದಾರೆ.

ಲೇಖಾ ಮತ್ತು ಕೋಮಲ್ ಅವರಲ್ಲದೆ, ನಮೋ ಭೂತಾತ್ಮ 2 ರ ಪಾತ್ರವರ್ಗದಲ್ಲಿ ಮಿಮಿಕ್ರಿ ಗೋಪಿ, ಮಹಂತೇಶ್, ಗೋವಿಂದೇಗೌಡ, ರುದ್ರೇಶ್ (ಗೌಳಿ) ಮತ್ತು ಮೋನಿಕಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ನೃತ್ಯ ನಿರ್ದೇಶಕ ವರುಣ್ ರಾಜ್ ಕೂಡ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರಕ್ಕೆ ಅರುಣ್ ಆಂಡ್ರ್ಯೂಸ್ ಸಂಗೀತ ಸಂಯೋಜಿಸಿದ್ದರೆ, ಹಾಲೇಶ್ ಎಸ್ (ಓ ಮೈ ಲವ್) ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ.

ಚಿತ್ರದ ಸಂಪೂರ್ಣ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದ್ದು, ಡಿಸೆಂಬರ್ 2 ರಂದು ನಮೋ ಭೂತಾತ್ಮ 2 ಚಿತ್ರೀಕರಣವನ್ನು ಆರಂಭಿಸಲು ನಿರ್ದೇಶಕ ಮುರಳಿ ಚಿಂತನೆ ನಡೆಸಿದ್ದಾರೆ. ಅದಕ್ಕೂ ಮೊದಲು ನವೆಂಬರ್ 27 ರಂದು ಚಿತ್ರದ ಫೋಟೋಶೂಟ್ ಮಾಡಲು ನಿರ್ದೇಶಕರು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!