ಯಶೋದಾ ಸಿನಿಮಾದ ಪೋಸ್ಟರ್ 
ಸಿನಿಮಾ ಸುದ್ದಿ

ಸಮಂತಾ ನಟನೆಯ ಯಶೋದಾ ಬಾಕ್ಸ್ ಆಫೀಸ್ ಕಲೆಕ್ಷನ್; ಉತ್ತಮ ಆರಂಭ, 8ನೇ ದಿನಕ್ಕೆ ಕೋಟಿ ಗಳಿಸಲು ಹೆಣಗಾಟ

ನಟಿ ಸಮಂತಾ ರುತ್ ಪ್ರಭು ಅಭಿಯನದ ಯಶೋದಾ ಚಿತ್ರವು ಬಿಡುಗಡೆಯಾದಾಗಿನಿಂದಲೂ ಗಲ್ಲಾಪೆಟ್ಟಿಯಲ್ಲಿ ಉತ್ತಮ ಆರಂಭವನ್ನು ಹೊಂದಿತ್ತು. ಹರಿ-ಹರೀಶ್ ಜೋಡಿಯ ನಿರ್ದೇಶನದ ವೈದ್ಯಕೀಯ ಥ್ರಿಲ್ಲರ್, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿಯೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ.

ನಟಿ ಸಮಂತಾ ರುತ್ ಪ್ರಭು ಅಭಿಯನದ ಯಶೋದಾ ಚಿತ್ರವು ಬಿಡುಗಡೆಯಾದಾಗಿನಿಂದಲೂ ಗಲ್ಲಾಪೆಟ್ಟಿಯಲ್ಲಿ ಉತ್ತಮ ಆರಂಭವನ್ನು ಹೊಂದಿತ್ತು. ಹರಿ-ಹರೀಶ್ ಜೋಡಿಯ ನಿರ್ದೇಶನದ ವೈದ್ಯಕೀಯ ಥ್ರಿಲ್ಲರ್, ಬಿಡುಗಡೆಯಾದ ಮೊದಲ ನಾಲ್ಕು ದಿನಗಳಲ್ಲಿಯೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ. ಇದಾದ ಬಳಿಕ ಗಲ್ಲಾಪೆಟ್ಟಿಗೆಯಲ್ಲಿ ತನ್ನ ವೇಗವನ್ನು ಕಳೆದುಕೊಂಡು, 8ನೇ ದಿನದಲ್ಲಿ ಕೋಟಿ ಗಳಿಸಲು ಹೆಣಗಾಡುತ್ತಿದೆ. ಯಶೋದಾ ಇದೀಗ 30 ಕೋಟಿ ರೂ. ಗಳಿಕೆಯ ಸಮೀಪದಲ್ಲಿದೆ.

ಒಂದು ಅಂದಾಜಿನ ಪ್ರಕಾರ, ಬಿಡುಗಡೆಯಾದ 8ನೇ ದಿನದಲ್ಲಿ ಚಿತ್ರವು 65-70 ಕೋಟಿ ರೂ. ಗಳಿಸಿದೆ. ಕಳೆದೆರಡು ದಿನಗಳಿಂದ ಚಿತ್ರವು 1 ಕೋಟಿ ರೂ. ಗಳಿಸಲು ಕೂಡ ಪರದಾಡುವಂತಾಗಿದೆ. ತೆಲುಗು ಮಾರುಕಟ್ಟೆಯಲ್ಲಿ ಉತ್ತಮ ಗಳಿಕೆಯನ್ನು ಕಂಡ ಚಿತ್ರ ಇತರೆಡೆಯಲ್ಲಿ ಗಮನ ಸೆಳೆಯುವಲ್ಲಿ ವಿಫಲವಾಯಿತು.

ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಾಲಾ ಅವರ ಪ್ರಕಾರ, ಚಿತ್ರವು ನಿಧಾನಗತಿಯಲ್ಲಿ ಸಾಗುತ್ತಿರುವುದರ ಹೊರತಾಗಿಯೂ, ಸಾಧಾರಣ ಬಜೆಟ್‌ನಲ್ಲಿ ನಿರ್ಮಿಸಿದ ಕಾರಣ ಯಶಸ್ವಿಯಾಗುತ್ತದೆ.

ಯಶೋದಾ ಚಿತ್ರವು ನವೆಂಬರ್ 11 ರಂದು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಯಿತು. ಇದೇ ವೇಳೆ ನಟ ಅಮಿತಾಬ್ ಬಚ್ಚನ್ ಅವರ ಉಂಚೈ ಮತ್ತು ಹಾಲಿವುಡ್ ಚಿತ್ರ 'ಬ್ಲ್ಯಾಕ್ ಪ್ಯಾಂಥರ್: ವಕಾಂಡ ಫಾರೆವರ್‌' ಚಿತ್ರಗಳು ಬಿಡುಗಡೆಯಾಗಿದ್ದವು.

ಯಶೋದಾ ಸಿನಿಮಾ ವೈದ್ಯಕೀಯ ಥ್ರಿಲ್ಲರ್ ಆಗಿದ್ದು, ಪಾತ್ರವು ಮಹಿಳೆಯರನ್ನು ಬಾಡಿಗೆ ತಾಯ್ತನಕ್ಕೆ ಬಳಸಿಕೊಳ್ಳುವ ಮತ್ತು ಬಲವಂತ ಮಾಡುವ ಮಾಫಿಯಾವನ್ನು ತೋರಿಸುತ್ತದೆ. ಚಿತ್ರದಲ್ಲಿ ಸಮಂತಾ ಅಭಿನಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ