ಸಿರಿ ಲಂಬೋದರ ವಿವಾಹ ಸ್ಟಿಲ್ 
ಸಿನಿಮಾ ಸುದ್ದಿ

39 ದಿನಗಳಲ್ಲಿ ಶೂಟಿಂಗ್ ಪೂರ್ಣಗೊಳಿಸಿದ 'ಸಿರಿ ಲಂಬೋದರ ವಿವಾಹ'

ಸೌರಭ್‌ ಕುಲಕರ್ಣಿ ನಿರ್ಮಾಣ ಮತ್ತು ನಿರ್ದೇಶನದ “ಸಿರಿ ಲಂಬೋದರ ವಿವಾಹ’ (ಎಸ್‌ಎಲ್‌ವಿ) ಸಿನಿಮಾದ ಟೀಸರ್‌ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ರಮೇಶ್‌ ಅರವಿಂದ್‌ ಟೀಸರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ನಟ ಮತ್ತು ನಿರೂಪಕ ಸೌರಭ್ ಕುಲಕರ್ಣಿ ಸಿರಿ ಲಂಬೋದರ ವಿವಾಹ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಸೌರಭ್‌ ಕುಲಕರ್ಣಿ ನಿರ್ಮಾಣ ಮತ್ತು ನಿರ್ದೇಶನದ “ಸಿರಿ ಲಂಬೋದರ ವಿವಾಹ’ (ಎಸ್‌ಎಲ್‌ವಿ) ಸಿನಿಮಾದ ಟೀಸರ್‌ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ರಮೇಶ್‌ ಅರವಿಂದ್‌ ಟೀಸರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ಮಾಪಕರು 39 ದಿನಗಳಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ಯೋಜನೆಯ ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್‌ಎಲ್‌ವಿ ತಂಡ ಬಿಡುಗಡೆ ಮಾಡಿದ ಮೊದಲ ಟೀಸರ್‌ನಲ್ಲಿ ರಮೇಶ್ ಅರವಿಂದ್ ಅವರು ಚಿತ್ರದ ಬಗ್ಗೆ ಕೆಲವು ಪ್ರಮುಖ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಸೌರವ್  ಕುಲಕರ್ಣಿ ನಿರೂಪಕ ಸಂಜೀವ್ ಕುಲಕರ್ಣಿ ಅವರ ಮಗ, ಸೌರವ್ ಬಾಲ್ಯ ನಟರಾಗಿ ಎಂಟ್ರ ಕೊಟ್ಟಿದ್ದರು, ಗುರು ರಾಘವೇಂದ್ರ ವೈಭವ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನಮನ ಗೆದ್ದಿದ್ದಾರೆ.

500 ಕ್ಕೂ ಹೆಚ್ಚು ಸ್ಟೇಜ್ ಶೋಗಳು ಮತ್ತು ಅನೇಕ ದೂರದರ್ಶನ ಕಾರ್ಯಕ್ರಮಗಳಿಗೆ ನಿರೂಪಕರಾಗಿರುವ ಸೌರಭ್ ನಮ್ಮನೆ ಪ್ರೊಡಕ್ಷನ್ಸ್‌ನಲ್ಲಿ ತಮ್ಮ ತಂಡದೊಂದಿಗೆ ಹಲವಾರು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ.

SLV ಚಿತ್ರದಲ್ಲಿ ಅಂಜನ್ ಎ ಭಾರದ್ವಾಜ್ ಮತ್ತು ದಿಶಾ ರಮೇಶ್ ನಾಯಕರಾಗಿ ನಟಿಸಿದ್ದಾರೆ ಮತ್ತು ರಾಜೇಶ್ ನಟರಂಗ, ಸುಂದರ್ ವೀಣಾ, ಪಿ ಡಿ ಸತೀಶ್ಚಂದ್ರ, ಶಿವು (ಮಜರಭಾರತ), ಮತ್ತು ಸದಾನಂದ ಕಾಳೆ (ಕಾಮಿಡಿ ಕಿಲಾಡಿಗಳು) ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಸ್ಪೆನ್ಸ್ ಅಂಶಗಳನ್ನು ಹೊಂದಿರುವ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾದಲ್ಲಿ  ಛಾಯಾಗ್ರಾಹಕರಾಗಿ ಕಿಟ್ಟಿ ಕೌಶಿಕ್ ಮತ್ತು ಮತ್ತು ಸಂಗೀತ ನಿರ್ದೇಶಕರಾಗಿ ಸಂಗರ್ಶ್ ಕುಮಾರ್ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT