ನಟ ನಾಗ ಚೈತನ್ಯ 
ಸಿನಿಮಾ ಸುದ್ದಿ

36ನೇ ಹುಟ್ಟುಹಬ್ಬದಂದು 'ಕಸ್ಟಡಿ' ಫಸ್ಟ್ ಲುಕ್‌ನಲ್ಲಿ ನಾಗ ಚೈತನ್ಯ, ಅಭಿಮಾನಿಗಳು ಫುಲ್ ಖುಷ್

ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಬುಧವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಮುಂಬರುವ ಸಿನಿಮಾದ 'ಎನ್‌ಸಿ 22' ನಿರ್ಮಾಪಕರು ಅಭಿಮಾನಿಗಳಿಗೆ ಸರ್‌ಪ್ರೈಸ್‌ ನೀಡಿದ್ದಾರೆ.

ನಟ ಅಕ್ಕಿನೇನಿ ನಾಗ ಚೈತನ್ಯ ಅವರು ಬುಧವಾರ ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರ ಮುಂಬರುವ ಸಿನಿಮಾದ 'ಎನ್‌ಸಿ 22' ನಿರ್ಮಾಪಕರು ಅಭಿಮಾನಿಗಳಿಗೆ ಸರ್‌ಪ್ರೈಸ್‌ ನೀಡಿದ್ದಾರೆ. ನಿರ್ಮಾಪಕರು ಚಿತ್ರಕ್ಕೆ 'ಕಸ್ಟಡಿ' ಎಂಬ ಕುತೂಹಲಕಾರಿ ಶೀರ್ಷಿಕೆ ನೀಡಿದ್ದಾರೆ ಮತ್ತು ಹೊಸ ಅವತಾರದಲ್ಲಿ ನಾಗ ಚೈತನ್ಯ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ.

ತೆಲುಗು-ತಮಿಳಿನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು ಪ್ರಮುಖ ಚಲನಚಿತ್ರ ನಿರ್ಮಾಪಕ ವೆಂಕಟ್ ಪ್ರಭು ನಿರ್ದೇಶಿಸಿದ್ದು, ಕೃತಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ 'ಎನ್‌ಸಿ 22' ಎಂದು ಹೆಸರಿಡಲಾಗಿತ್ತು.

ಕಸ್ಟಡಿ' ನಾಗ ​​ಚೈತನ್ಯ ಅವರ ವೃತ್ತಿಜೀವನದಲ್ಲಿ ಅತ್ಯಂತ ಹೆಚ್ಚಿನ ಬಜೆಟ್ ಚಿತ್ರವಾಗಿದೆ. ಶ್ರೀನಿವಾಸ ಚಿತ್ತೂರಿ ಅವರು ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಚಿತ್ರನಿರ್ಮಾಪಕ ವೆಂಕಟ್ ಪ್ರಭು ಅವರು ನಾಗ ಚೈತನ್ಯ ಅವರನ್ನು ಸಂಪೂರ್ಣವಾಗಿ ಹೊಸ ಅವತಾರದಲ್ಲಿ ತೋರಿಸಿದ್ದಾರೆ. ಅದು ಪ್ರಭಾವಶಾಲಿ ಮತ್ತು ಉತ್ತೇಜಕವಾಗಿದೆ. ತಮ್ಮ ಪ್ರತಿಯೊಂದು ಚಿತ್ರಕ್ಕೂ ವಿಶಿಷ್ಟ ಅಡಿಬರಹವನ್ನು ನೀಡುವ ಮೂಲಕ ಹೆಸರುವಾಸಿಯಾಗಿರುವ ಪ್ರಭು, 'ಕಸ್ಟಡಿ'ಗೆ 'ನೀವು ಪ್ರಪಂಚದಲ್ಲಿ ನೋಡಲು ಬಯಸುವ ಬದಲಾವಣೆಯು ನಿಮ್ಮಲ್ಲಿ ಆಗಬೇಕು' ಎಂದು ಟ್ಯಾಗ್‌ಲೈನ್ ನೀಡಿದ್ದಾರೆ.

ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ತಂಡ ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಅರವಿಂದ್ ಸ್ವಾಮಿ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು, ನಟಿ ಪ್ರಿಯಾಮಣಿ ಪವರ್ ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಸಂಪತ್ ರಾಜ್, ಶರತ್‌ಕುಮಾರ್, ಪ್ರೇಮ್‌ಜಿ, ವೆನ್ನೆಲ ಕಿಶೋರ್, ಪ್ರೇಮಿ ವಿಶ್ವನಾಥ್ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಇಸೈಜ್ಞಾನಿ ಇಳಯರಾಜ ಮತ್ತು ಯುವನ್ ಶಂಕರ್ ರಾಜಾ ಸಂಗೀತ ಸಂಯೋಜಿಸಲು ಸಿದ್ಧವಾಗಿದ್ದು, ಪವನ್ ಕುಮಾರ್ ಅವರು ಸಿನಿಮಾವನ್ನು ಪ್ರಸ್ತುತಪಡಿಸಲಿದ್ದಾರೆ. ಅಬ್ಬೂರಿ ರವಿ ಸಂಭಾಷಣೆ ಬರೆಯುತ್ತಿದ್ದು, ಎಸ್.ಆರ್. ಕತೀರ್ ಸಿನಿಮಾಟೋಗ್ರಫಿ ಚಿತ್ರಕ್ಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ

Cricket: ಸಚಿನ್ ಅಲ್ಲ.. ಸೂರ್ಯವಂಶಿ ಅಲ್ಲವೇ ಅಲ್ಲ.. ಐತಿಹಾಸಿಕ ಪದಾರ್ಪಣೆ ಹೊರತಾಗಿಯೂ ಈ ಆಟಗಾರನ ದಾಖಲೆ ಮುರಿಯುವಲ್ಲಿ ವಿಫಲ!

2nd T20I: Debut ಪಂದ್ಯದಲ್ಲೇ Vaibhav Sooryavanshi ಝಲಕ್, ಇಂಗ್ಲೆಂಡ್ ಗೆ ಗೆಲ್ಲಲು 191 ರನ್ ಸವಾಲಿನ ಗುರಿ ನೀಡಿದ ಭಾರತ!