ನಾಟ್ ಔಟ್ ಚಿತ್ರದಲ್ಲಿ ಅಜಯ್ ಪೃಥ್ವಿ ಮತ್ತು ರಚನಾ ಇಂದರ್ 
ಸಿನಿಮಾ ಸುದ್ದಿ

ರಚನಾ ಇಂದರ್- ಅಜಯ್ ಪೃಥ್ವಿ ನಟನೆಯ 'ನಾಟ್ ಔಟ್' ಚಿತ್ರಕಥೆ ಹುಲಿ-ಕುರಿ ಆಟವನ್ನು ಆಧರಿಸಿದೆ: ನಿರ್ದೇಶಕ ಅಂಬರೀಶ

ನಾಟ್ ಔಟ್ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸವು ಇತ್ತೀಚೆಗಷ್ಟೇ ಮುಗಿದಿದ್ದು, ನಿರ್ಮಾಪಕರು ಕ್ಲಿಯರೆನ್ಸ್‌ಗಾಗಿ ಸೆನ್ಸಾರ್ ಮಂಡಳಿಯ ಮೊರೆ ಹೋಗಿದ್ದಾರೆ. ಈಮಧ್ಯೆ, ಚಿತ್ರತಂಡವು ಚಿತ್ರದ ಮೊದಲ ಮೋಷನ್ ಪೋಸ್ಟರ್ ಅನ್ನು ಎಂಎಲ್‌ಸಿ ಪುಟ್ಟಣ್ಣ ಮತ್ತು ಕಿಸ್ ಸಿನಿಮಾ ನಿರ್ದೇಶಕ ಎ.ಪಿ. ಅರ್ಜುನ್ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿತು.

ನಾಟ್ ಔಟ್ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸವು ಇತ್ತೀಚೆಗಷ್ಟೇ ಮುಗಿದಿದ್ದು, ನಿರ್ಮಾಪಕರು ಕ್ಲಿಯರೆನ್ಸ್‌ಗಾಗಿ ಸೆನ್ಸಾರ್ ಮಂಡಳಿಯ ಮೊರೆ ಹೋಗಿದ್ದಾರೆ. ಈಮಧ್ಯೆ, ಚಿತ್ರತಂಡವು ಚಿತ್ರದ ಮೊದಲ ಮೋಷನ್ ಪೋಸ್ಟರ್ ಅನ್ನು ಎಂಎಲ್‌ಸಿ ಪುಟ್ಟಣ್ಣ ಮತ್ತು ಕಿಸ್ ಸಿನಿಮಾ ನಿರ್ದೇಶಕ ಎ.ಪಿ. ಅರ್ಜುನ್ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿತು.

ಅಂಬರೀಷ ನಿರ್ದೇಶನದ ಈ ಚಿತ್ರವು 'ಅದೃಶ್ಯ ಅಂಪೈರ್‌ನಿಂದ ತೀರ್ಪು' ಎಂಬ ಅಡಿಬರಹವನ್ನು ಹೊಂದಿದೆ. 'ಕರ್ನಾಟಕ, ತಮಿಳುನಾಡು ಮತ್ತು ಆಂಧ್ರದ ಗಡಿಯಲ್ಲಿರುವ ಹಳ್ಳಿಯಲ್ಲಿ ಜನಪ್ರಿಯವಾಗಿರುವ ಹುಲಿ-ಕುರಿ ಆಟವನ್ನು ಆಧರಿಸಿದ ಕಥೆ ಸಿನಿಮಾದಲ್ಲಿದೆ' ಎಂದು ನಿರ್ದೇಶಕರು ತಮ್ಮ ಚಿತ್ರದ ಬಗ್ಗೆ ವಿವರಿಸುತ್ತಾರೆ.

ಚೊಚ್ಚಲ ಚಿತ್ರದಲ್ಲಿ ಅಜಯ್ ಪೃಥ್ವಿ ಆ್ಯಂಬ್ಯುಲೆನ್ಸ್ ಚಾಲಕನಾಗಿ ಕಾಣಿಸಿಕೊಳ್ಳುತ್ತಿದ್ದರೆ, ನಟಿ ರಚನಾ ಇಂದರ್ ನರ್ಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಾರ್ಕ್ ಹ್ಯೂಮರ್ ಚಿತ್ರದಲ್ಲಿ ರವಿಶಂಕರ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. 'ರವಿಶಂಕರ್ ಅವರು ಹಿಂದೆಂದೂ ಕಂಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ಈ ಕಥೆಯ ಮುಖ್ಯ ಆಧಾರ ಸ್ತಂಭವಾಗಿದ್ದಾರೆ. ಸಿದ್ಧಿ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ' ಎಂದಿದ್ದಾರೆ.

ರಾಷ್ಟ್ರಕೂಟ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ವಿ. ರವಿಕುಮಾರ್ ಮತ್ತು ಶಂಶುದ್ದೀನ್ ಅವರ ನಿರ್ಮಾಣದ ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಅವರ ಸಂಗೀತ ಮತ್ತು ಹಾಲೇಶ್ ಅವರ ಛಾಯಾಗ್ರಹಣವಿದೆ. ನಾಟ್ ಔಟ್‌ನಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಸಲ್ಮಾನ್, ಗೋವಿಂದೇಗೌಡ ಮತ್ತು ಪ್ರಶಾಂತ್ ಸಿದ್ದಿ ಚಿತ್ರದ ತಾರಾಗಣದಲ್ಲಿದ್ದಾರೆ.

ಸೆನ್ಸಾರ್ ಮಂಡಳಿಯ ಅನುಮತಿಗಾಗಿ ಕಾಯುತ್ತಿರುವ ನಿರ್ಮಾಪಕರು ಈ ವರ್ಷಾಂತ್ಯದಲ್ಲಿ ಅಥವಾ 2023 ರ ಆರಂಭದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT