ಸೋನು ಸೂದ್ 
ಸಿನಿಮಾ ಸುದ್ದಿ

ಕರುನಾಡಿನಲ್ಲಿ 'ಶ್ರೀಮಂತ' ರೈತನಾದ ನಟ ಸೋನು ಸೂದ್!

ದರ್ಶನ್ ಅವರ ಕುರುಕ್ಷೇತ್ರ (2019) ಚಿತ್ರದಲ್ಲಿ ಅರ್ಜುನ ಪಾತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಸೋನು ಸೂದ್, ಒಂದು ವಿರಾಮದ ನಂತರ ಮತ್ತೆ ಕನ್ನಡ ಸಿನಿಮಾಗೆ ಮರಳಿದ್ದಾರೆ.

ದರ್ಶನ್ ಅವರ ಕುರುಕ್ಷೇತ್ರ (2019) ಚಿತ್ರದಲ್ಲಿ ಅರ್ಜುನ ಪಾತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಸೋನು ಸೂದ್, ಒಂದು ವಿರಾಮದ ನಂತರ ಮತ್ತೆ ಕನ್ನಡ ಸಿನಿಮಾಗೆ ಮರಳಿದ್ದಾರೆ. ಹಾಸನ್ ರಮೇಶ್ ಅವರ ಚೊಚ್ಚಲ ನಿರ್ದೇಶನದ 'ಶ್ರೀಮಂತ' ಚಿತ್ರದಲ್ಲಿ ನಟಿಸಲು ಸಿದ್ಧರಾಗಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ನಾಯಕನಾಗಿ ಅಭಿನಯಿಸಿರುವ ಶ್ರೀಮಂತ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಪೋಸ್ಟರ್ ಹಾಗೂ ರೈತ ಗೀತೆಯ ಲಿರಿಕಲ್ ವಿಡಿಯೋ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ.

ಇಂದಿನ ದಿನಗಳಲ್ಲಿ ರೈತರ ಬದುಕಿನ ಮೇಲೆ ಬೆಳಕು ಚೆಲ್ಲುವ ಈ ಚಿತ್ರದ ಕುರಿತು ಮಾತನಾಡಿದ ಹಾಸನ್, ತಂತ್ರಜ್ಞಾನವು ಈ ಕ್ಷೇತ್ರವನ್ನು ಹೇಗೆ ನಿರ್ಲಕ್ಷಿಸಿದೆ ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ, ಈ ಸಿನಿಮಾದಲ್ಲಿ ಕಮರ್ಷಿಯಲ್ ಅಂಶಗಳೂ ಇವೆ.’’ ಮೊದಲ ಹಾಡು ಮಳೆ ಮುನಿದರೆ ಸಂತ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದು ಕೇವಲ ರೈತರ ಸಿನಿಮಾ ಮಾತ್ರವಲ್ಲ. ಎಲ್ಲ ಅಂಶವನ್ನೊಳಗೊಂಡ ಸಿನಿಮಾ. ದೇಶದಲ್ಲಿ ಶೇ.80ರಷ್ಟು ರೈತರಿರುವ ಹಾಗೆ ಕಥೆ ಮಾಡಲಾಗಿದೆ. ಇದು ಸಂಗೀತಮಯ ಸಿನಿಮಾ. 8 ಗೀತೆಗಳ ಜೊತೆಗೆ ಒಗಟು, ಗಾದೆಗಳು ಇವೆ ಎಂದರು.  ಮಳೆ ಮುನಿದರೆ ಸಂತ ಎಂಬ ಹಾಡನ್ನು ದಿವಂಗತ ಎಸ್.ಪಿ ಬಾಲಸುಬ್ರಮಣ್ಯಂ ಹಾಡಿದ್ದಾರೆ.

ಮರಾಠಿ ಬೆಡಗಿ ವೈಷ್ಣವಿ ಪಟವರ್ಧನ್, ವೈಷ್ಣವಿ ಚಂದ್ರನ್ ಮೆನನ್, ರಾಜು ತಾಳಿಕೋಟೆ, ಕಲ್ಯಾಣಿ, ರಮೇಶ್ ಭಟ್, ರವಿಶಂಕರ್ ಗೌಡ, ಸಾಧು ಕೋಕಿಲ, ಚರಣ್ ರಾಜ್, ಗಿರಿ, ಕುರಿಬಾಂಡ್ ರಂಗ, ಬ್ಯಾಂಕ್ ಮಂಜಣ್ಣ, ಬಸುರಾಜ್ ಹಾಸನ್ ಹಾಗೂ ಮುಂತಾದವರು ಅಭಿನಯಿಸಿದ್ದಾರೆ. ಹಂಸಲೇಖ ಸಂಗೀತ ಹಾಗೂ ಸಾಹಿತ್ಯ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT