ಪ್ರೇಮ್ ಮತ್ತು ಮೋಹನ್ ಲಾಲ್ 
ಸಿನಿಮಾ ಸುದ್ದಿ

ಜೋಗಿ ಪ್ರೇಮ್- ಧ್ರುವ ಸರ್ಜಾ ಸಿನಿಮಾದಲ್ಲಿ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್?

ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್  ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ ಬರಲಿದ್ದಾರೆ.

ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್  ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ ಬರಲಿದ್ದಾರೆ.

ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ನಾನಾ ಸಿನಿಮಾ ರಂಗದ ಕಲಾವಿದರು ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪ್ರೇಮ್  ಹಂಚಿಕೊಂಡಿದ್ದು, ಇದೊಂದು ಅಪರೂಪದ ಭೇಟಿ ಆಗಿತ್ತು ಎಂದು ಬರೆದುಕೊಂಡಿದ್ದಾರೆ.

ಇಂತಹ ಮಹಾನ್ ಕಲಾವಿದನನ್ನು ಭೇಟಿ ಮಾಡಿದ್ದು ಸಂಭ್ರಮ ತಂದಿದೆ ಎಂದಿರುವ ಪ್ರೇಮ್, ಅಕ್ಟೋಬರ್ 20ರ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದೂ ಅವರು ಕೋರಿದ್ದಾರೆ.  ಪ್ರೇಮ್ ನಿರ್ದೇಶನದ ಈ ಸಿನಿಮಾದಲ್ಲಿ ಮೋಹನ್ ಲಾಲ್ ಅವರು ನಟಿಸಲಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ಕೆವಿಎನ್ ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಈಗಾಗಲೇ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಮೈಸೂರಿನಲ್ಲಿ ಸಿನಿಮಾದ ಮುಹೂರ್ತವಾಗಿದ್ದು, ಅರ್ಜುನ್ ಜನ್ಯ ಈ ಸಿನಿಮಾಗಾಗಿ ಸಂಗೀತ ಸಂಯೋಜನೆಯ ಕೆಲಸವನ್ನೂ ಆರಂಭಿಸಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಮಾತೂ ಇದೆ.

ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಖಾತೆಗಳಲ್ಲಿ ಮೋಹನ್ ಲಾಲ್ ಅವರನ್ನು ಭೇಟಿಯಾದ ಚಿತ್ರವನ್ನು ಹಂಚಿಕೊಂಡಿರುವ ಜೋಗಿ ಪ್ರೇಮ್ ಮೋಹನ್ ಲಾಲ್ ಅವರ ಸರಳತೆಗೆ ಮನಸೋತು ಬರವಣಿಗೆ ಮೂಲಕ ಹೊಗಳಿದ್ದಾರೆ. ನಿಮ್ಮ ಬೆಂಬಲ ನಾವು ಮತ್ತಷ್ಟು ಬೆಳವಣಿಗೆ ಹೊಂದಲು ಸಹಕಾರಿಯಾಗಿದೆ ಎಂದು ಮೋಹನ್ ಲಾಲ್ ಅವರನ್ನು ಹೊಗಳಿ ಪ್ರೇಮ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್