ಗಂಧದ ಗುಡಿ ಟ್ರೈಲರ್ 
ಸಿನಿಮಾ ಸುದ್ದಿ

ಅಪ್ಪು ಡ್ರೀಮ್ ಪ್ರಾಜೆಕ್ಟ್ 'ಗಂಧದ ಗುಡಿ' ಟ್ರೈಲರ್ ಬಿಡುಗಡೆ, ಪ್ರಧಾನಿ ಮೋದಿ ಪ್ರಶಂಸೆ

ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಟ್ರೈಲರ್ ಇಂದು ಬಿಡುಗಡೆಯಾಗಿದೆ. ಅಪ್ಪು ಡ್ರೀಮ್ ಪ್ರಾಜೆಕ್ಟ್ ನಲ್ಲಿ ನಾಡಿನ ಅದ್ಬುತ ಪ್ರಕೃತಿ ಸಂಪತ್ತನ್ನು ಸೆರೆಹಿಡಿಯಲಾಗಿದೆ.

ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಟ್ರೈಲರ್ ಇಂದು ಬಿಡುಗಡೆಯಾಗಿದೆ. ಅಪ್ಪು ಡ್ರೀಮ್ ಪ್ರಾಜೆಕ್ಟ್ ನಲ್ಲಿ ನಾಡಿನ ಅದ್ಬುತ ಪ್ರಕೃತಿ ಸಂಪತ್ತನ್ನು ಸೆರೆಹಿಡಿಯಲಾಗಿದೆ.

2 ನಿಮಿಷ 39 ಸೆಕೆಂಡ್ ಗಳ ಟ್ರೈಲರ್ ನಲ್ಲಿ ನಾಡಿನ ಅರಣ್ಯ, ಜಲ ಹಾಗೂ ವನ್ಯ ಸಂಪತ್ತನ್ನು ತೋರಿಸಲಾಗಿದೆ.ಟ್ರೈಲರ್ ನಲ್ಲಿ ತಮ್ಮ ನೆಚ್ಚಿನ ನಟನನ್ನು ಅಪ್ಪು ಅಭಿಮಾನಿಗಳು ಕಣ್ತುಂಬಿಕೊಂಡು, ಸಂತೋಷ ಪಡುತ್ತಿದ್ದಾರೆ.

ಯೂ ಟ್ಯೂಬ್ ನಲ್ಲಿ ಬಿಡುಗಡೆಯಾದ ತುಸು ಸಮಯದಲ್ಲಿಯೇ 4 ಲಕ್ಷ 36 ಸಾವಿರ ಜನ ವೀಕ್ಷಣೆ ಮಾಡಿದ್ದಾರೆ.  6 ಸಾವಿರದ 365 ಕಾಮೆಂಟ್ ಗಳು ಬಂದಿವೆ. ಗಂಧದ ಗುಡಿ ಟೀಸರ್ ನೋಡಿ ಖುಷಿಯಾದ ಅಭಿಮಾನಿಗಳು ಇಂಥ ಹೊತ್ತಿನಲ್ಲಿ ಪುನೀತ್ ಇಲ್ಲದಿರುವುದಕ್ಕೆ ಮಮ್ಮಲ ಮರುಗುತ್ತಿದ್ದಾರೆ.

ಗಂಧದ ಗುಡಿ ಸಂಪೂರ್ಣ ಕಾಡಿನಲ್ಲಿಯೇ ಚಿತ್ರೀಕರಣವಾಗಿದೆ. ಇದರ ಟೀಸರ್ ದೃಶ್ಯಗಳು, ಬೆಳಕಿನ ಸಂಯೋಜನೆ, ಹಿನ್ನಲೆ ಸಂಗೀತ ಅನನ್ಯವಾಗಿದೆ. ಪುನೀತ್ ತಾವೇ ಡ್ಯೂಪ್ ಇಲ್ಲದೇ ಸಾಹಸ ದೃಶ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮತ್ತೆಮತ್ತೆ ವೀಕ್ಷಿಸಬೇಕೆನ್ನಿಸುವ ರೀತಿಯಲ್ಲಿ ಟೀಸರ್ ಇರುವುದು ಗಮನಾರ್ಹ. ಮೇಕಿಂಗ್ ನಲ್ಲಿ ಗಮನಾರ್ಹ ಪಾತ್ರ ವಹಿಸಿರುವ ಅಮೋಘವರ್ಷ ಅವರ ಪರಿಶ್ರಮ  ಎದ್ದುಕಾಣುತ್ತಿದೆ.

ಗಂಧದ ಗುಡಿ ಟ್ರೈಲರ್ ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪುನೀತ್ ರಾಜ್ ಕುಮಾರ್ ವಿಶ್ವದಾದ್ಯಂತ ಲಕ್ಷಾಂತರ ಮಂದಿಯ ಹೃದಯದಲ್ಲಿದ್ದಾರೆ. ಅವರೊಬ್ಬ ಪ್ರತಿಭಾವಂತ, ತೇಜಸ್ಸಿನ ವ್ಯಕ್ತಿಯಾಗಿದ್ದರು.  ಗಂಧದ ಗುಡಿ ಪ್ರಕೃತಿ ಮಾತೆ, ಕರ್ನೌಟಕ ನೈಸರ್ಗಿಕ ಸೌಂದರ್ಯಕ್ಕೆ ಗೌರವವಾಗಿದೆ. ಅವರ ಪ್ರಯತ್ನಕ್ಕೆ ಶುಭಾಶಯ ಎಂದು ಟ್ವೀಟ್ ಮಾಡಿದ್ದಾರೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ ಈ ಸಾಕ್ಷ್ಯಚಿತ್ರವನ್ನು ಅಮೋಘ ವರ್ಷ ನಿರ್ದೇಶಿಸಿದ್ದಾರೆ. ಇದೇ ತಿಂಗಳ 28 ರಂದು ಈ ಸಾಕ್ಷ್ಯಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT