ಶ್ರೀಮುರಳಿ 
ಸಿನಿಮಾ ಸುದ್ದಿ

ನನ್ನ ಗಮನ ಸಂಪೂರ್ಣವಾಗಿ ಡಾ. ಸೂರಿ ನಿರ್ದೇಶನದ 'ಬಘೀರಾ' ಮೇಲಿದೆ: ನಟ ಶ್ರೀಮುರಳಿ

ನಟ ಶ್ರೀಮುರಳಿ ಸಂಪೂರ್ಣ ವರ್ಕ್ ಮೋಡ್‌ನಲ್ಲಿದ್ದು, ಅವರ ಸಂಪೂರ್ಣ ಗಮನವೆಲ್ಲ ಅವರ ಮುಂದಿನ 'ಬಘೀರಾ' ಸಿನಿಮಾದ ಮೇಲೆ ಕೇಂದ್ರೀಕೃತವಾಗಿದೆ. ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ಅಡಿಯಲ್ಲಿ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಬಘೀರಾ ಸಿದ್ಧವಾಗುತ್ತಿದೆ.

ನಟ ಶ್ರೀಮುರಳಿ ಸಂಪೂರ್ಣ ವರ್ಕ್ ಮೋಡ್‌ನಲ್ಲಿದ್ದು, ಅವರ ಸಂಪೂರ್ಣ ಗಮನವೆಲ್ಲ ಅವರ ಮುಂದಿನ 'ಬಘೀರಾ' ಸಿನಿಮಾದ ಮೇಲೆ ಕೇಂದ್ರೀಕೃತವಾಗಿದೆ. ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ಅಡಿಯಲ್ಲಿ ಬಹು ನಿರೀಕ್ಷಿತ ಬಹುಭಾಷಾ ಚಿತ್ರ ಬಘೀರಾ ಸಿನಿಮಾ ಸಿದ್ಧವಾಗುತ್ತಿದೆ.

ಲಕ್ಕಿ ಸಿನಿಮಾ ಖ್ಯಾತಿಯ ಡಾ. ಸೂರಿ ನಿರ್ದೇಶನದ ಆ್ಯಕ್ಷನ್ ಕಮರ್ಷಿಯಲ್ ಎಂಟರ್‌ಟೈನರ್ ಬಘೀರಾ ಸಿನಿಮಾಗೆ ಶ್ರೀಮುರಳಿ ಅಭಿನಯದ 'ಉಗ್ರಂ' ಚಿತ್ರದ ಮೂಲಕ ನಿರ್ದೇಶಕರಾಗಿ  ಚೊಚ್ಚಲ ಪ್ರವೇಶ ಮಾಡಿದ್ದ ಹಾಗೂ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಚಿತ್ರಕಥೆ ಬರೆದಿದ್ದಾರೆ.

ಬಘೀರಾ ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೋಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ ಮತ್ತು ಫಸ್ಟ್ ಲುಕ್ ಪೋಸ್ಟರ್ 'ಸಮಾಜ ಕಾಡಿದಾಗ' ಎಂಬ ಅಡಿಬರಹದೊಂದಿಗೆ ರಿಲೀಸ್ ಆಗಿದೆ.  ಈ ವಾರದ ಆರಂಭದಲ್ಲಿ ಪ್ರಾರಂಭವಾಗುವ ಮುಂದಿನ ಹಂತದ ಶೂಟಿಂಗ್‌ಗಾಗಿ ಇಡೀ ತಂಡವು ಮಂಗಳೂರಿನಲ್ಲಿದೆ.

ಸಿನಿಮಾ ಸೆಟ್‌ನಲ್ಲಿರುವ ಶ್ರೀಮುರಳಿ ಮಾತನಾಡಿ, ತನ್ನ ಸಂಪೂರ್ಣ ಗಮನ ಬಘೀರಾದ ಮೇಲಿದೆ. 'ಶೇ 25 ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ ಮತ್ತು ನಾವು ಇನ್ನೂ ಬಹಳ ದೂರ ಸಾಗಬೇಕಾಗಿದೆ. ಮಂಗಳೂರಿನಲ್ಲಿ ಶೂಟಿಂಗ್ ನಂತರ, ವಿಶ್ರಾಂತಿ ತೆಗೆದುಕೊಂಡು ಅಕ್ಟೋಬರ್ 29 ರಿಂದ ಗೋವಾದಲ್ಲಿ ಶೂಟಿಂಗ್ ನಡೆಯಲಿದೆ' ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT