ನಟ ದರ್ಶನ್- ತರುಣ್ ಕಿಶೋರ್ ಸುಧೀರ್ 
ಸಿನಿಮಾ ಸುದ್ದಿ

ತರುಣ್ ಕಿಶೋರ್ ಸುಧೀರ್ ನಿರ್ದೇಶನದ 'ಡಿ 56' ಚಿತ್ರೀಕರಣ ಪುನರಾರಂಭಿಸಿದ ನಟ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್‌ ಅನ್ನು ಪುನರಾರಂಭಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್‌ ಅನ್ನು ಪುನರಾರಂಭಿಸಿದ್ದಾರೆ.

ತಾತ್ಕಾಲಿಕವಾಗಿ 'ಡಿ56' ಸಿನಿಮಾದ ಬಗ್ಗೆ ಇನ್ನಷ್ಟು ವಿವರಗಳನ್ನು ಚಿತ್ರತಂಡ ನೀಡಬೇಕಿದ್ದು, ಡಿ 56 ರ ಫಸ್ಟ್ ಲುಕ್ ಥೀಮ್ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರವು ನಿಜ ಜೀವನದ ಘಟನೆಯನ್ನು ಆಧರಿಸಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ನವೆಂಬರ್‌ನಲ್ಲಿ ಒಂದು ತಿಂಗಳ ಕಾಲ ಚಿತ್ರತಂಡ ಹೈದರಾಬಾದ್‌ಗೆ ತೆರಳಲಿದೆ.

ಡಿ 56 ಸಿನಿಮಾಗೆ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಚೊಚ್ಚಲ ಸಿನಿಮಾದಲ್ಲೇ ಅವರು ದರ್ಶನ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಚೌಕ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದ ದರ್ಶನ್, ರಾಬರ್ಟ್ ಸಿನಿಮಾದ ನಂತರ ಮೂರನೇ ಬಾರಿಗೆ ತರುಣ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತರುಣ್ ಇತ್ತೀಚೆಗಷ್ಟೇ ಬಿಡುಗಡೆಯಾದ ಗುರು ಶಿಷ್ಯರು ಸಿನಿಮಾದ ಮೂಲಕ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಗುರು ಶಿಷ್ಯರು ಸಿನಿಮಾ ಸಿನಿಪ್ರಿಯರಿಂದ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ ಮತ್ತು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

SCROLL FOR NEXT