ನಟ ದರ್ಶನ್- ತರುಣ್ ಕಿಶೋರ್ ಸುಧೀರ್ 
ಸಿನಿಮಾ ಸುದ್ದಿ

ತರುಣ್ ಕಿಶೋರ್ ಸುಧೀರ್ ನಿರ್ದೇಶನದ 'ಡಿ 56' ಚಿತ್ರೀಕರಣ ಪುನರಾರಂಭಿಸಿದ ನಟ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್‌ ಅನ್ನು ಪುನರಾರಂಭಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್‌ ಅನ್ನು ಪುನರಾರಂಭಿಸಿದ್ದಾರೆ.

ತಾತ್ಕಾಲಿಕವಾಗಿ 'ಡಿ56' ಸಿನಿಮಾದ ಬಗ್ಗೆ ಇನ್ನಷ್ಟು ವಿವರಗಳನ್ನು ಚಿತ್ರತಂಡ ನೀಡಬೇಕಿದ್ದು, ಡಿ 56 ರ ಫಸ್ಟ್ ಲುಕ್ ಥೀಮ್ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರವು ನಿಜ ಜೀವನದ ಘಟನೆಯನ್ನು ಆಧರಿಸಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ನವೆಂಬರ್‌ನಲ್ಲಿ ಒಂದು ತಿಂಗಳ ಕಾಲ ಚಿತ್ರತಂಡ ಹೈದರಾಬಾದ್‌ಗೆ ತೆರಳಲಿದೆ.

ಡಿ 56 ಸಿನಿಮಾಗೆ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಚೊಚ್ಚಲ ಸಿನಿಮಾದಲ್ಲೇ ಅವರು ದರ್ಶನ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಚೌಕ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದ ದರ್ಶನ್, ರಾಬರ್ಟ್ ಸಿನಿಮಾದ ನಂತರ ಮೂರನೇ ಬಾರಿಗೆ ತರುಣ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತರುಣ್ ಇತ್ತೀಚೆಗಷ್ಟೇ ಬಿಡುಗಡೆಯಾದ ಗುರು ಶಿಷ್ಯರು ಸಿನಿಮಾದ ಮೂಲಕ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಗುರು ಶಿಷ್ಯರು ಸಿನಿಮಾ ಸಿನಿಪ್ರಿಯರಿಂದ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ ಮತ್ತು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT