ನಿರ್ದೇಶಕ ಪ್ರೇಮ್ 
ಸಿನಿಮಾ ಸುದ್ದಿ

ಜೊಂಬಿ ಸಿನಿಮಾದಲ್ಲಿ ನಟಿಸಲಿದ್ದಾರೆ ನಟ-ನಿರ್ದೇಶಕ ಪ್ರೇಮ್

ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ತಮ್ಮ ಮುಂದಿನ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುತ್ತಿರುವಾಗಲೇ, ಎಂ. ಶಶಿಧರ್ ಅವರ ನಿರ್ದೇಶನದಲ್ಲಿ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

ನಟ-ಚಲನಚಿತ್ರ ನಿರ್ಮಾಪಕ ಪ್ರೇಮ್ ಸದ್ಯ ತಮ್ಮ ನಿರ್ದೇಶನ ಮತ್ತು ತಮ್ಮ ನಟನೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ತಮ್ಮ ಮುಂದಿನ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುತ್ತಿರುವಾಗಲೇ, ಎಂ. ಶಶಿಧರ್ ಅವರ ನಿರ್ದೇಶನದಲ್ಲಿ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

ಇನ್ನೂ ಬಿಡುಗಡೆಯಾಗಬೇಕಿರುವ ಘಾರ್ಗಾ ಚಿತ್ರದ ಮೂಲಕ ಎಂ.ಶಶಿಧರ್ ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದಾಗಿದ್ದು, ನಾಯಕನಾಗಿ ಅರುಣ್ ರಾಮ್ ಪ್ರಸಾದ್ ನಟಿಸುತ್ತಿದ್ದಾರೆ. ಈ ಪ್ರೀತಿ ಏಕೆ ಭೂಮಿ ಮೇಲಿದೆ, ಪ್ರೇಮ್ ಅಡ್ಡ, ದಾಸವಾಳ ಮತ್ತು ಡಿಕೆ ಮುಂತಾದ ಸಿನಿಮಾಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ಪ್ರೇಮ್ ಅವರು ಈ ಮೂಲಕ ತಮ್ಮ ಆರನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ನಟಿಸುವುದರ ಹೊರತಾಗಿ ಪ್ರೇಮ್ ತಮ್ಮ ಪ್ರೇಮ್ ಡ್ರೀಮ್ಸ್ ಬ್ಯಾನರ್ ಅಡಿಯಲ್ಲಿ A2 ಫಿಲ್ಮ್ಸ್ ಸಹಯೋಗದೊಂದಿಗೆ ಈ ಸಿನಿಮಾದ ನಿರ್ಮಾಣ ಕಾರ್ಯವನ್ನು ಮಾಡುತ್ತಿದ್ದಾರೆ. ಪ್ರೇಮ್-ಶಶಿಧರ್ ಅವರ ಈ ಸಿನಿಮಾವನ್ನು ಜೊಂಬಿ ಚಿತ್ರ (ಶವವನ್ನು ಪುನಶ್ಚೇತನಗೊಳಿಸುವ ಪ್ರಕ್ರಿಯೆ) ಎಂದು ಬಿಂಬಿಸಲಾಗಿದೆ ಮತ್ತು ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಸಿನಿಮಾವನ್ನು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 22 ರಂದು ಪ್ರೇಮ್ ಅವರ ಹುಟ್ಟುಹಬ್ಬದಂದು ನಟನ ಫಸ್ಟ್ ಲುಕ್ ಪೋಸ್ಟರ್ ಜೊತೆಗೆ ಈ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ.

ಸಂದೀಪ್ ಅವರ ಛಾಯಾಗ್ರಹಣ ಚಿತ್ರಕ್ಕಿಂದು, ಅರ್ಜುನ್ ಜನ್ಯ, ವಿ ಹರಿಕೃಷ್ಣ ಮತ್ತು ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಮೂಲಗಳ ಪ್ರಕಾರ, ಶಶಿಧರ್ ಅವರೊಂದಿಗಿನ ತಮ್ಮ ಪ್ರಾಜೆಕ್ಟ್‌ಗೆ ಪ್ರೇಮ್ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎನ್ನಲಾಗಿದೆ.

ಈಮಧ್ಯೆ, ಪ್ರೇಮ್ ತನ್ನ ಬಹು ನಿರೀಕ್ಷಿತ ಬಹುಭಾಷಾ ಚಿತ್ರದ ಶೀರ್ಷಿಕೆ ಟೀಸರ್ ಅನ್ನು ಅಕ್ಟೋಬರ್ 20 ರಂದು ಧ್ರುವ ಸರ್ಜಾ ಅವರೊಂದಿಗೆ ಬಿಡುಗಡೆ ಮಾಡಲಿದ್ದಾರೆ. ಎಪಿ ಅರ್ಜುನ್ ಅವರ ಮಾರ್ಟಿನ್ ಚಿತ್ರೀಕರಣವನ್ನು ಪೂರ್ಣಗೊಳಿಸಿದ ನಂತರ ಧ್ರುವ ಅವರು ಈ ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ