ನಿರ್ದೇಶಕ ಪ್ರೇಮ್ 
ಸಿನಿಮಾ ಸುದ್ದಿ

ಜೊಂಬಿ ಸಿನಿಮಾದಲ್ಲಿ ನಟಿಸಲಿದ್ದಾರೆ ನಟ-ನಿರ್ದೇಶಕ ಪ್ರೇಮ್

ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ತಮ್ಮ ಮುಂದಿನ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುತ್ತಿರುವಾಗಲೇ, ಎಂ. ಶಶಿಧರ್ ಅವರ ನಿರ್ದೇಶನದಲ್ಲಿ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

ನಟ-ಚಲನಚಿತ್ರ ನಿರ್ಮಾಪಕ ಪ್ರೇಮ್ ಸದ್ಯ ತಮ್ಮ ನಿರ್ದೇಶನ ಮತ್ತು ತಮ್ಮ ನಟನೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌ ಅಡಿಯಲ್ಲಿ ತಮ್ಮ ಮುಂದಿನ ಚಿತ್ರದಲ್ಲಿ ಧ್ರುವ ಸರ್ಜಾ ಅವರಿಗೆ ಆ್ಯಕ್ಷನ್ ಕಟ್ ಹೇಳಲು ರೆಡಿಯಾಗುತ್ತಿರುವಾಗಲೇ, ಎಂ. ಶಶಿಧರ್ ಅವರ ನಿರ್ದೇಶನದಲ್ಲಿ ಚಿತ್ರವೊಂದರಲ್ಲಿ ನಟಿಸಲಿದ್ದಾರೆ.

ಇನ್ನೂ ಬಿಡುಗಡೆಯಾಗಬೇಕಿರುವ ಘಾರ್ಗಾ ಚಿತ್ರದ ಮೂಲಕ ಎಂ.ಶಶಿಧರ್ ನಿರ್ದೇಶಿಸುತ್ತಿರುವ ಎರಡನೇ ಚಿತ್ರ ಇದಾಗಿದ್ದು, ನಾಯಕನಾಗಿ ಅರುಣ್ ರಾಮ್ ಪ್ರಸಾದ್ ನಟಿಸುತ್ತಿದ್ದಾರೆ. ಈ ಪ್ರೀತಿ ಏಕೆ ಭೂಮಿ ಮೇಲಿದೆ, ಪ್ರೇಮ್ ಅಡ್ಡ, ದಾಸವಾಳ ಮತ್ತು ಡಿಕೆ ಮುಂತಾದ ಸಿನಿಮಾಗಳಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ಪ್ರೇಮ್ ಅವರು ಈ ಮೂಲಕ ತಮ್ಮ ಆರನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ನಟಿಸುವುದರ ಹೊರತಾಗಿ ಪ್ರೇಮ್ ತಮ್ಮ ಪ್ರೇಮ್ ಡ್ರೀಮ್ಸ್ ಬ್ಯಾನರ್ ಅಡಿಯಲ್ಲಿ A2 ಫಿಲ್ಮ್ಸ್ ಸಹಯೋಗದೊಂದಿಗೆ ಈ ಸಿನಿಮಾದ ನಿರ್ಮಾಣ ಕಾರ್ಯವನ್ನು ಮಾಡುತ್ತಿದ್ದಾರೆ. ಪ್ರೇಮ್-ಶಶಿಧರ್ ಅವರ ಈ ಸಿನಿಮಾವನ್ನು ಜೊಂಬಿ ಚಿತ್ರ (ಶವವನ್ನು ಪುನಶ್ಚೇತನಗೊಳಿಸುವ ಪ್ರಕ್ರಿಯೆ) ಎಂದು ಬಿಂಬಿಸಲಾಗಿದೆ ಮತ್ತು ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಸಿನಿಮಾವನ್ನು ಮಾಡುತ್ತಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 22 ರಂದು ಪ್ರೇಮ್ ಅವರ ಹುಟ್ಟುಹಬ್ಬದಂದು ನಟನ ಫಸ್ಟ್ ಲುಕ್ ಪೋಸ್ಟರ್ ಜೊತೆಗೆ ಈ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ.

ಸಂದೀಪ್ ಅವರ ಛಾಯಾಗ್ರಹಣ ಚಿತ್ರಕ್ಕಿಂದು, ಅರ್ಜುನ್ ಜನ್ಯ, ವಿ ಹರಿಕೃಷ್ಣ ಮತ್ತು ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಮೂಲಗಳ ಪ್ರಕಾರ, ಶಶಿಧರ್ ಅವರೊಂದಿಗಿನ ತಮ್ಮ ಪ್ರಾಜೆಕ್ಟ್‌ಗೆ ಪ್ರೇಮ್ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎನ್ನಲಾಗಿದೆ.

ಈಮಧ್ಯೆ, ಪ್ರೇಮ್ ತನ್ನ ಬಹು ನಿರೀಕ್ಷಿತ ಬಹುಭಾಷಾ ಚಿತ್ರದ ಶೀರ್ಷಿಕೆ ಟೀಸರ್ ಅನ್ನು ಅಕ್ಟೋಬರ್ 20 ರಂದು ಧ್ರುವ ಸರ್ಜಾ ಅವರೊಂದಿಗೆ ಬಿಡುಗಡೆ ಮಾಡಲಿದ್ದಾರೆ. ಎಪಿ ಅರ್ಜುನ್ ಅವರ ಮಾರ್ಟಿನ್ ಚಿತ್ರೀಕರಣವನ್ನು ಪೂರ್ಣಗೊಳಿಸಿದ ನಂತರ ಧ್ರುವ ಅವರು ಈ ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT