ಕಾಂತಾರ 
ಸಿನಿಮಾ ಸುದ್ದಿ

IMDb ಭಾರತೀಯ ಚಿತ್ರರಂಗದ ಅತ್ಯುತ್ತಮ 250 ಚಿತ್ರಗಳ ಪೈಕಿ ಅಗ್ರಸ್ಥಾನಕ್ಕೇರಿದ ಕಾಂತಾರ!

ಸದ್ಯ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದೆ. ಕಾಂತಾರ ಇದೀಗ 'ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ' ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ನವದೆಹಲಿ: ಸದ್ಯ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವ ಕಾಂತಾರ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದೆ. ಕಾಂತಾರ ಇದೀಗ 'ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ' ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇತ್ತೀಚೆಗೆ IMDb ಟಾಪ್ 250 ಚಲನಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲಿ 'ಕಾಂತಾರ' ನಂ. 1 ಸ್ಥಾನವನ್ನು ಪಡೆದುಕೊಂಡಿದೆ. ಇದು ಅಭಿಮಾನಿಗಳಿಂದ ಹೆಚ್ಚು ಇಷ್ಟಪಟ್ಟ ಮತ್ತು ಹೆಚ್ಚು ರೇಟಿಂಗ್ ಪಡೆದ ಭಾರತೀಯ ಚಲನಚಿತ್ರವಾಗಿದೆ. ಇದು ಗಲ್ಲಾಪೆಟ್ಟಿಗೆಯಲ್ಲಿ ಬೆಳೆಯುತ್ತಿರುವಾಗ ಚಿತ್ರವು ಸಾಧಿಸಿದ ಮತ್ತೊಂದು ಸಾಧನೆಗೆ ಸೇರಿಸಿದೆ. ಶುಕ್ರವಾರದಿಂದ ವೀಕ್ಷಕರ ಸಂಖ್ಯೆಯು ಸುಮಾರು 40-50% ರಷ್ಟು ಹೆಚ್ಚಾಗಿದೆ.

ದಿನದಿಂದ ದಿನಕ್ಕೆ ತನ್ನ ಕಲೆಕ್ಷನ್ ಅನ್ನು ಹೆಚ್ಚಿಸಿಕೊಳ್ಳುತ್ತಿರುವ ಕಾಂತಾರ ಇದೀಗ ವಿಶ್ವದಾದ್ಯಂತ 119 ಕೋಟಿ ಗಳಿಸುವ ಮೂಲಕ 100 ಕೋಟಿ ಕ್ಲಬ್ ಸೇರಿದ 6ನೇ ಕನ್ನಡ ಚಿತ್ರವಾಗಿದೆ. ಕರ್ನಾಟಕದಲ್ಲಿ ಕಾಂತಾರ ಸಿನಿಮಾ ಹಾಲ್‌ಗಳು ಇನ್ನೂ ತುಂಬಿ ತುಳುಕುತ್ತಿದೆ. 

ಇದರ ಜೊತೆಗೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲೂ ಚಿತ್ರ ಬಿಡುಗಡೆಯಾಗಿದೆ. ಹೀಗಾಗಿ ಚಿತ್ರದ ಕಲೆಕ್ಷನ್ ಮತ್ತಷ್ಟು ಜಾಸ್ತಿಯಾಗಲಿದೆ. ಇನ್ನು ಕಳೆದ ಶನಿವಾರ 14 ಕೋಟಿ ಹಾಗೂ ಭಾನುವಾರ 18 ಕೋಟಿ ಕಲೆಕ್ಷನ್ ಮಾಡಿದೆ.

ಕಾಂತಾರ ಹೊಗಳಿದ ಸೆಲೆಬ್ರಿಟಿಗಳು!
ಸಿನಿಮಾಗಳ ಬಗ್ಗೆ, ಸಮಾಜದ ಆಗುಹೋಗುಗಳ ಬಗ್ಗೆ ವಿಲಕ್ಷಣವಾಗಿ, ವಿಚಿತ್ರವಾಗಿ, ಹಲವು ಬಾರಿ ವಿವಾದಾತ್ಮಕವಾಗಿ ಟ್ವೀಟ್ ಮಾಡಿ ಸುದ್ದಿಯಾಗುತ್ತಾರೆ ನಿರ್ದೇಶಕ ರಾಮ್ ಗೋಪಾಲ್ ವರ್ಮ ಕಾಂತಾರವನ್ನು ಹೊಗಳಿದ್ದಾರೆ. 'ಕಾಂತಾರ' ಚಿತ್ರವು ಎಲ್ಲಾ ಕಡೆಯಿಂದ ಸಾಕಷ್ಟು ಪ್ರೀತಿಯನ್ನು ಪಡೆಯುತ್ತಿದೆ. ಪ್ರಮುಖ ಸೆಲೆಬ್ರಿಟಿಗಳಾದ ಪ್ರಭಾಸ್, ಧನುಷ್, ಅನಿಲ್ ಕುಂಬ್ಳೆ, ಶಿಲ್ಪಾ ಶೆಟ್ಟಿ, ಕಂಗನಾ ರನೌತ್ ಮತ್ತು ಭಾರತದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT