ಕಾಂತಾರ ಚಿತ್ರದ ಪೋಸ್ಟರ್ ಮತ್ತು ನಟ ಉಪೇಂದ್ರ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

'ದೈವ, ಭೂತ ಕೋಲ ಕರಾವಳಿ ಭಾಗದ ಜನರ ನಂಬಿಕೆ, ಅದರ ಬಗ್ಗೆ ಮಾತನಾಡಬಾರದು, ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು': ನಟ ಉಪೇಂದ್ರ

ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿರುವುದು ನಿಜವಲ್ಲ ಎಂದು ನಟ ಚೇತನ್ ಅಹಿಂಸ ಕಾಂತಾರ ಚಿತ್ರದ ಬಗ್ಗೆ ಮಾತನಾಡಿ ಹೇಳಿರುವುದು ವಿವಾದ ಸೃಷ್ಟಿಸಿದೆ.

ಬೆಂಗಳೂರು: ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿರುವುದು ನಿಜವಲ್ಲ ಎಂದು ನಟ ಚೇತನ್ ಅಹಿಂಸ ಕಾಂತಾರ (Kantara film) ಚಿತ್ರದ ಬಗ್ಗೆ ಮಾತನಾಡಿ ಹೇಳಿರುವುದು ವಿವಾದ ಸೃಷ್ಟಿಸಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಟ ಉಪೇಂದ್ರ, ಇಂತಹ ವಿಷಯಗಳನ್ನು ಕೆದಕಲು, ಮಾತನಾಡಲು ಹೋಗಬಾರದು, ಅದು ಬೆಂಕಿಗೆ ತುಪ್ಪ ಸುರಿದಂತೆ ಆಗುತ್ತದೆ. 

ಭೂತ ಕೋಲ, ದೈವ ನಂಬುವುದು ನಮ್ಮ ವೈಯಕ್ತಿಕ. ಅದನ್ನು ಸಮಾಜದ ಮುಂದೆ ಕಿತ್ತಾಡುವುದು ಅಸಹ್ಯ.ನಾನು ಕರಾವಳಿ ಭಾಗದವನು, ಭೂತ-ಕೋಲಗಳನ್ನು ನೋಡಿಕೊಂಡು ಬೆಳೆದವನು. ನಮ್ಮ ಭಾಗದಲ್ಲಿ ಭೂತ ಕೋಲದ ಬಗ್ಗೆ ವಿಶೇಷವಾದ ನಂಬಿಕೆಯಿದೆ. ಇವತ್ತಿಗೂ ನಮ್ಮ ತಂದೆ ಪ್ರತಿವರ್ಷ ನಾಗನ ಪೂಜೆ ಮಾಡುತ್ತಾರೆ. ಬಹಳ ನಂಬಿಕೆಯಿರುವ ಜಾಗ ಕೂಡ, ಅದರ ಬಗ್ಗೆ ಮಾತನಾಡಬಾರದು ಎಂದರು.

ಕಾಂತಾರ ಚಿತ್ರವನ್ನು ಬಹಳ ಪರಿಣಾಮಕಾರಿಯಾಗಿ ತೆಗೆದಿದ್ದಾರೆ. ನನಗೂ ಈ ತರಹದ ಚಿತ್ರ ಮಾಡಬೇಕೆಂದಿದೆ. ನೋಡೋಣ ರಿಷಬ್ ಹತ್ತಿರ ಮಾತನಾಡುತ್ತೇನೆ ಎಂದು ನಟ ಉಪೇಂದ್ರ ನಕ್ಕರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT