ನಟ ಚೇತನ್ ಕುಮಾರ್ 
ಸಿನಿಮಾ ಸುದ್ದಿ

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ವಿರುದ್ಧ ದೂರು ದಾಖಲು!, ರಿಷಬ್ ಹೇಳಿದ್ದೇನು?

ಭೂತಕೋಲ ಆಚರಣೆ ಕುರಿತು ಹೇಳಿಕೆ ನೀಡಿದ್ದ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ಬೆಂಗಳೂರು: ಭೂತಕೋಲ ಆಚರಣೆ ಕುರಿತು ಹೇಳಿಕೆ ನೀಡಿದ್ದ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಚಿತ್ರದಲ್ಲಿ ತೋರಿಸಿದ ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುವುದಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ರಿಷಬ್​ ಶೆಟ್ಟಿ ಅವರು ಹೇಳಿರುವುದು ನಿಜವಲ್ಲ ಎಂದು ಹೇಳುವ ಮೂಲಕ ವಿವಾದದ ಕಿಡಿ ಹಚ್ಚಿದ್ದ ಚೇತನ್ ವಿರುದ್ಧ ಇದೀಗ ಪೊಲೀಸ್ ದೂರು ದಾಖಲಾಗಿದೆ. ಈ ಸಂಬಂಧ ಹಿಂದೂ ಜಾಗರಣಾ ವೇದಿಕೆಯವರು ಕಾರ್ಕಳ ಪೊಲೀಸರ ಬಳಿ ದೂರು ದಾಖಲು ಮಾಡಿದ್ದಾರೆ.

ಮೊದಲು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಚೇತನ್ ಅವರು, ‘ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ’ ಎಂದು ಚೇತನ್​ ಪೋಸ್ಟ್ ಮಾಡಿದ್ದರು.

ಈ ಹೇಳಿಕೆ ಬಗ್ಗೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಚೇತನ್ ಹೇಳಿಕೆಯನ್ನು ಖಂಡಿಸಿದರು. ಆ ಬಳಿಕ ಚೇತನ್ ಅವರು ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಿದರು. ಈಗ ಹಿಂದೂ ಜಾಗರಣಾ ವೇದಿಕೆಯವರು ಚೇತನ್ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ರಿಷಬ್ ಶೆಟ್ಟಿ ಸ್ಪಷ್ಟನೆ
ಇನ್ನು ವಿವಾದದ ಸಂಬಂಧ ಪ್ರತಿಕ್ರಿಯೆ ನೀಡಿರುವ ನಟ-ನಿರ್ದೇಶಕ ರಿಷಬ್ ಶೆಟ್ಟಿ, '‘ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು.

ಇದಕ್ಕೆ ಬೇಕಾದ ಎಲ್ಲಾ ಮುಂಜಾಗ್ರತೆಗಳನ್ನು ನಾನು ತೆಗೆದುಕೊಂಡಿದ್ದೆ. ನನ್ನ ಜೊತೆಯಲ್ಲೇ ಅವರನ್ನು ಇರಿಸಿಕೊಂಡು ಪ್ರತಿಯೊಂದು ಶಾಟ್ ತೆಗೆದಿದ್ದೇವೆ. ದೈವಾರಾಧನೆಗೆ ಸಂಬಂಧಿಸಿದ ಪ್ರತಿ ದೃಶ್ಯಗಳನ್ನು ಅಲ್ಲಿನ ಜನರಿಗೆ ತೋರಿಸುತ್ತಿದ್ದೆವು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ. ಆ ಬಗ್ಗೆ ನೋ ಕಾಮೆಂಟ್ಸ್. ಅದಕ್ಕೆ ಸಂಬಂಧ ಪಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲಾ ನಾವೇಕೆ ತಲೆ ಕೆಡಿಸಿಕೊಳ್ಳಬೇಕು’ ಎಂದು ಖಾರವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT