ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಪುನೀತ್ ರಾಜಕುಮಾರ್ ಅಭಿಯನದ ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ!

ದಿವಂಗತ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಇಂದು ಅರಮನೆ ಮೈದಾನದಲ್ಲಿ ಗಂಧದ ಗುಡಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ಪುನೀತ್ ಪರ್ವ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬೊಮ್ಮಾಯಿ ಅವರು ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. 

ಇದು ಯುವ ಜನತೆಗೆ ಮಾದರಿ ಆಗುವಂತಹ ಸಾಕ್ಷ್ಯಚಿತ್ರ ಆದ್ದರಿಂದ ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​. ಅ.28ರಂದು 'ಗಂಧದ ಗುಡಿ' ರಿಲೀಸ್​ ಆಗಲಿದೆ. ಕೆಆರ್ ಜಿ ಸ್ಟುಡಿಯೋ ಈ ಚಿತ್ರವನ್ನು ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡುತ್ತಿದೆ.

ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾರತೀಯ ಚಿತ್ರರಂಗದ ಅನೇಕಾ ಖ್ಯಾತನಾಮರು ಪಾಲ್ಗೊಂಡಿದ್ದು ಪುನೀತ್ ಜೊತೆಗಿನ ತಮ್ಮ ಒಡನಾಟವನ್ನು ಹಂಚಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ ಕುಟುಂಬದವರು, ಕನ್ನಡ ನಟ, ನಟಿಯರು, ತಮಿಳಿನ ನಟ ಸೂರ್ಯ, ಪ್ರಕಾಶ್ ರಾಜ್, ಅಖಿಲ್ ಅಕ್ಕಿನೇನಿ, ಸಿದ್ಧಾರ್ಥ್, ರಾಣಾ ದಗ್ಗುಬಾಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT