ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ 
ಸಿನಿಮಾ ಸುದ್ದಿ

'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ'ಗೆ ಅಜಯ್ ರಾವ್ ನಾಯಕ!

ನಟ ಅಜಯ್ ರಾವ್ ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರೊಂದಿಗೆ ಥ್ರಿಲ್ಲರ್ ಸಿನಿಮಾ ಯೋಜನೆಯೊಂದನ್ನು ಘೋಷಿಸಿದ್ದಾರೆ

ನಟ ಅಜಯ್ ರಾವ್ ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರೊಂದಿಗೆ ಥ್ರಿಲ್ಲರ್ ಸಿನಿಮಾ ಯೋಜನೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಗೆ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಎಂಬ ಶೀರ್ಷಿಕೆ ನೀಡಲಾಗಿದ್ದು, ಸಿನಿಮಾದಲ್ಲಿ ಹಾಸ್ಯದ ಅಂಶಗಳೂ ಇರಲಿವೆ. 

ನಿರ್ದೇಶಕ ಸುನಿ ಅವರೊಂದಿಗೆ ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಅಭಿಷೇಕ್, ಈ ಯೋಜನೆಯ ಮೂಲಕ ಚೊಚ್ಚಲ ನಿರ್ದೇಶನ ಮಾಡುತ್ತಿದ್ದು, ಕುತೂಹಲಕಾರಿ ಪೋಸ್ಟರ್ ಮೂಲಕ ಈ ಯೋಜನೆಯ ಅಧಿಕೃತ ಘೋಷಣೆ ಮಾಡಲಾಯಿತು.
 
ಚೊಚ್ಚಲ ನಿರ್ದೇಶನ ಮಾಡುತ್ತಿರುವ ನಿರ್ದೇಶಕ ಈ ಕಥೆಯನ್ನು ಬ್ಯಾಂಕ್ ದರೋಡೆ ಘಟನೆಯ ಸುತ್ತ ಹೆಣೆದಿದ್ದು, 2023 ರ ಜನವರಿಯಿಂದ ಚಿತ್ರೀಕರಣ ಪ್ರಾರಂಭಿಸಲು ಯೋಜನೆ ಹೊಂದಿದ್ದಾರೆ.

ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರ ಬ್ಯಾನರ್ ಶ್ರೀದೇವಿ ಎಂಟರ್ಟೈನರ್ಸ್ ಅಡಿಯಲ್ಲಿ   ಮೂಡಿಬರುತ್ತಿರುವ 5 ನೇ ಸಿನಿಮಾ ಇದಾಗಿದ್ದು, ಸಿನಿಮಾಗೆ ಜುದಾ ಸ್ಯಾಂಡಿ ಸಂಗೀತವಿದ್ದು, ಅಭಿಷೇಕ್ ಜಿ ಕಾಸರಗೋಡು ಅವರ ಸಿನಿಮಾಟೋಗ್ರಫಿ ಇದೆ. ತೇಜಸ್ ಆರ್ ಸಿನಿಮಾ ಸಂಕಲನದ ಜವಾಬ್ದಾರಿ ಹೊಂದಿದ್ದಾರೆ. ಕಲಾ ವಿಭಾಗದ ಮುಖ್ಯಸ್ಥರಾಗಿ ರಘು ಇರಲಿದ್ದಾರೆ.
 
ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಯೋಜನೆಯ ಜೊತೆಗೆ ಅಜಯ್, ನಿರ್ದೇಶಕ ಮಂಜು ಸ್ವರಾಜ್ ಅವರೊಂದಿಗೂ ಸಿನಿಮ ಮಾಡುತ್ತಿದ್ದು, ನವೆಂಬರ್ ನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT